Advertisement

ನೂಪುರ್ ಶರ್ಮಾ ಬೆಂಬಲಕ್ಕೆ ರಾಜ್ ಠಾಕ್ರೆ: ಝಾಕಿರ್ ನಾಯ್ಕ್ ಹೇಳಿಲ್ಲವೇ?

05:30 PM Aug 23, 2022 | Team Udayavani |

ಮುಂಬಯಿ: ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡುವ ಮೂಲಕ ವಿವಾದಗಳಲ್ಲಿ ಸಿಲುಕಿರುವ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಾರೆ. ಅಮಾನತುಗೊಂಡಿರುವ ಬಿಜೆಪಿ ವಕ್ತಾರೆಯನ್ನು ಬೆಂಬಲಿಸಿದ ಅವರು, “ಎಲ್ಲರೂ ಕ್ಷಮೆಯಾಚಿಸುವಂತೆ ಕೇಳಿದ್ದರು. ಆದರೆ ನೂಪುರ್ ಶರ್ಮಾ ಹೇಳಿದ್ದನ್ನೇ ಜಾಕಿರ್ ನಾಯ್ಕ್ ಕೂಡ ಈ ಹಿಂದೆಯೇ ಹೇಳಿದ್ದರು. ಯಾರೂ ಝಾಕಿರ್ ಕ್ಷಮೆ ಕೇಳಲಿಲ್ಲ” ಎಂದು ಹೇಳಿದರು.

Advertisement

ರಾಷ್ಟ್ರೀಯ ಮಾಧ್ಯಮವೊಂದರ ಜತೆ ಮಾತನಾಡಿದ ರಾಜ್ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ಗುರಿಯಾಗಿಸಿಕೊಂಡು, ಹಿಂದೂ ದೇವರು ಮತ್ತು ದೇವತೆಗಳ ಬಗ್ಗೆ ಹಲವು ಬಾರಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದರು.

ಮೇ ತಿಂಗಳ ಕೊನೆಯ ವಾರದಲ್ಲಿ ಟಿವಿ ವಾಹಿನಿಯೊಂದರಲ್ಲಿ ನಡೆದ ಚರ್ಚೆಯಲ್ಲಿ ನೂಪುರ್ ಶರ್ಮಾ ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಸಾಕಷ್ಟು ಗದ್ದಲ ಎದ್ದಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು.ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದಕ್ಕಾಗಿ ಪುಣೆಯ ಉಮೇಶ್ ಕೋಲ್ಹೆ ಮತ್ತು ಉದಯಪುರದ ಕನ್ಹಯ್ಯಾಲಾಲ್ ಅವರನ್ನೂ ಹತ್ಯೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next