Advertisement

ಶಾಸಕ ಶಿವನಗೌಡ ನಾಯಕ ವಿರುದ್ಧ ಹರಿಹಾಯ್ದು ಮಾವ ರಾಜಶೇಖರ ನಾಯಕ

10:00 AM Nov 04, 2019 | keerthan |

ರಾಯಚೂರು: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಬಳ್ಳಾರಿ ಗಣಿಧಣಿಗಳ ರೀತಿ ದರ್ಪ ತೋರುತ್ತಿದ್ದಾರೆ ಎಂದು ಆರ್ ಡಿಸಿಸಿ ಮಾಜಿ ಅಧ್ಯಕ್ಷ ರಾಜಶೇಖರ ನಾಯಕ ಟೀಕಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾಲಹಳ್ಳಿಯಿಂದ ಮುಷ್ಟೂರು ರಸ್ತೆ ಕಾಮಗಾರಿ ನನೆಗುದಿದೆ ಬಿದ್ದಿದೆ. ಇದನ್ನು ಪ್ರಶ್ನಿಸಿ ಶಾಂತಿಯುತವಾಗಿ ಪಾದಯಾತ್ರೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸುವ ಮೂಲಕ ಪ್ರಶ್ನಿಸುವ ಹಕ್ಕು ದಮನ ಮಾಡಿದ್ದಾರೆ. ನಾಲ್ಕು ಬಾರಿ ಶಾಸಕರಾದ ಶಿವನಗೌಡರಿಂದ ಕ್ಷೇತ್ರದ ಅಭಿವೃದ್ಧಿ ಆಗಿಲ್ಲ. ಗುತ್ತಿಗೆದಾರರಿಗೆ ಅನಗತ್ಯ ಕಿರುಕುಳ ನೀಡಿದ ಕಾರಣ ಅವರು ಕಾಮಗಾರಿ ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ ಎಂದು ದೂರಿದರು.

ಶಾಸಕರು ಗುತ್ತಿಗೆದಾರರಂತೆ, ಮದ್ಯ ದೊರೆಗಳಂತೆ, ಇಸ್ಪೀಟ್ ದಂಧೆ ನಡೆಸುವ ಮಧ್ಯವರ್ತಿಗಳಂತಾಗಿದ್ದಾರೆ. ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ದೂರಿದರು.

ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯನ್ನೇ ಈಡೇರಿಸಿಲ್ಲ. ಅದನ್ನು ಕೇಳಿದ್ದಕ್ಕೆ ಇಂಥ ಹೋರಾಟಕ್ಕೆ ಮುಂದಾಗಿದ್ದಾರೆ. ಶೀಘ್ರದಲ್ಲಿ ರಸ್ತೆ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳದಿದ್ದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next