Advertisement

Rajasthan: ಮೊಹರಂ ವೇಳೆ ಶರಬತ್‌ ಕುಡಿದು 400 ಮಂದಿ ಅಸ್ವಸ್ಥ

08:34 PM Jul 17, 2024 | Team Udayavani |

ರಾಜಸ್ಥಾನ: ರಾಜಸ್ಥಾನದ ಬಸ್ವಾರ್‌ನಲ್ಲಿ ಮೊರಹಂ ಹಬ್ಬದ ಆಚರಣೆಯ ಪ್ರಯುಕ್ತ ಶರಬತ್‌ ಸೇವಿಸಿ 400 ಮಂದಿ ಅಸ್ವಸ್ಥರಾಗಿದ್ದಾರೆ.

Advertisement

ಶರಬತ್ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳು ಸೇರಿದಂತೆ ಹಲವರಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹಲವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದರ ಹೊರತಾಗಿಯೂ 100 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೊಹರಂ ಹಿನ್ನೆಲೆಯಲ್ಲಿ ಮುಚ್ಚಿದ್ದ ಮೆಡಿಕಲ್‌ ಶಾಪ್‌ಗಳ ಬಾಗಿಲು ತೆರೆದು ಓಆರ್‌ಎಸ್‌ ನೀಡಿ ಅವರಿಗೆ ಆರಂಭಿಕ ಚಿಕಿತ್ಸೆ ನೀಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next