Advertisement

ರಾಜಸ್ಥಾನ: ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಸದಸ್ಯರ ಸಾಮೂಹಿಕ ರಾಜೀನಾಮೆ

10:45 PM Aug 16, 2022 | Team Udayavani |

ಕೋಟಾ: ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ರಾಜಸ್ಥಾನದ ಬಾರನ್‌ ಮುನ್ಸಿಪಲ್‌ ಕೌನ್ಸಿಲ್‌ನ 12 ಮಂದಿ ಕಾಂಗ್ರೆಸ್‌ ಕೌನ್ಸಿಲರ್‌ಗಳು ಮಂಗಳವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Advertisement

ಜಲೋರ್‌ನಲ್ಲಿ ಕುಡಿಯುವ ನೀರಿನ ಮಡಿಕೆಯನ್ನು ಮುಟ್ಟಿದ ಎಂಬ ಕಾರಣಕ್ಕೆ ದಲಿತ ಸಮುದಾಯಕ್ಕೆ ಸೇರಿದ 9 ವರ್ಷದ ಮಗುವನ್ನು ಶಿಕ್ಷಕರೊಬ್ಬರು ಹೊಡೆದು ಕೊಂದ ಘಟನೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಘಟನೆ ಖಂಡಿಸಿ ಸೋಮವಾರವಷ್ಟೇ ಬಾರನ್‌-ಅತುಲ್‌ ಶಾಸಕ ಪಾನಾ ಚಾಂದ್‌ ಮೇಘಾÌಲ್‌ ರಾಜೀನಾಮೆ ನೀಡಿದ್ದರು. ಇದೇ ವೇಳೆ, ರಾಜಸ್ಥಾನ ಕಾಂಗ್ರೆಸ್‌ ಮಂಗಳವಾರ ಮೃತ ಬಾಲಕನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next