Advertisement

ರಾಜಸ್ಥಾನ : ಗುಜ್ಜರ್‌ ಸಹಿತ 5 ಸಮುದಾಯಗಳಿಗೆ ಶೇ.1 ಮೀಸಲಾತಿ

06:57 PM Jul 02, 2018 | udayavani editorial |

ಜೈಪುರ : ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್‌ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ.

Advertisement

ಇದೇ ಜುಲೈ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೈಪುರ ರಾಲಿ ನಡೆಯುವುದಕ್ಕೆ ಪೂರ್ವಭಾವಿ ಎಂಬಂತೆ ಈ ಮೀಸಲಾತಿಯನ್ನು ರಾಜಸ್ಥಾನ ಸರಕಾರ ಪ್ರಕಟಿಸಿದೆ. 

ಪ್ರಧಾನಿ ಮೋದಿ ಅವರ ರಾಲಿ ನಡೆಯುವ ತಾಣದಲ್ಲೇ ತಾವು ಮೀಸಲಾತಿಯನ್ನು ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಗುಜ್ಜರ್‌ ಸಮುದಾಯದವರು ಈ ಮೊದಲು ಬೆದರಿಕೆ ಹಾಕಿದ್ದರು.

ಪ್ರಧಾನಿ ಮೋದಿ ಅವರು ತಮ್ಮ ರಾಲಿ ನಡೆಯುವ ತಾಣದಲ್ಲೇ ಸರಕಾರದ ವಿವಿಧ ಯೋಜನೆಗಳ ಫ‌ಲಾನುಭವಿಗಳನ್ನು ಭೇಟಿಯಾಗುವರು. 

ಶೇ. 1ರ ಮೀಸಲಾತಿಯ ಲಾಭ ಪಡೆಯುವ ಸಮುದಾಯಗಳೆಂದರೆ ಗೋದಿಯಾ ಲೋಹರ್‌, ಬಂಜಾರಾ, ಗುಜ್ಜರ್‌, ರೈಕಾ ಮತ್ತು ಗಡಾರಿಯಾ. 

Advertisement

ಈ ಸಮುದಾಯಗಳಿಗೆ ಶೇ.1ರ ಮೀಸಲಾತಿಯನ್ನು ಕಲ್ಪಿಸುವ ದಿಶೆಯಲ್ಲಿ ಸರಕಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಮೊದಲನೇಯದು ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಕ್ಕೆ ಸಂಬಂಧಿಸಿದ ಮೀಸಲಾತಿ. ಎರಡನೇದು ಸರಕಾರಿ ಉದ್ಯೋಗಗಳಲ್ಲಿನ ಮೀಸಲಾತಿ.

Advertisement

Udayavani is now on Telegram. Click here to join our channel and stay updated with the latest news.

Next