Advertisement

ವಾದ್ರಾ ಭೂಅಕ್ರಮ : ಸಿಬಿಐ ತನಿಖೆಗೆ ಶಿಫಾರಸು

09:40 AM Aug 23, 2017 | Team Udayavani |

ಜೈಪುರ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ, ಉದ್ಯಮಿ ರಾಬರ್ಟ್‌ ವಾದ್ರಾ ಮೇಲಿರುವ ಭೂ ಅಕ್ರಮಗಳ ಆರೋಪ ಕುರಿತು ತನಿಖೆ ನಡೆಸುವಂತೆ ರಾಜಸ್ಥಾನ ಸರ್ಕಾರ ಸಿಬಿಐಗೆ ಲಿಖೀತ ಮನವಿ ಸಲ್ಲಿಸಿದೆ. ರಾಜಸ್ಥಾನದ ಈ ನಡೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಚುನಾವಣೆ ಸನ್ನಿಹಿತವಾಗುತ್ತಿರುವುದರಿಂದ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಅಕ್ರಮಗಳ ಕುರಿತು ತನಿಖೆ ನಡೆಸಲು ಸರ್ಕಾರ ಸಮಿತಿ ರಚಿಸಿದೆ. ಆದರೆ ಈವರೆಗೂ ಸಮಿತಿ ಯಾವುದೇ ವರದಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next