Advertisement

ಬಾಲಕಿ ಜೊತೆ ಮಾತನಾಡಲು ಬಂದ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಮೂತ್ರ ಕುಡಿಸಿದ ಗ್ರಾಮಸ್ಥರು

05:17 PM Feb 07, 2023 | Team Udayavani |

ರಾಜಸ್ಥಾನ: ಬಾಲಕಿಯನ್ನು ಭೇಟಿಯಾಗಲು ಬಂದಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ಬಾಯಿಗೆ ಮೂತ್ರ ಸುರಿದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ.

Advertisement

ಪ್ರಕರಣ ನಡೆದಿರುವ ಕುರಿತು ಗ್ರಾಮದ ಯಾರೊಬ್ಬರೂ ಠಾಣೆಗೆ ದೂರು ನೀಡಿರದ ಹಿನ್ನೆಲೆಯಲ್ಲಿ ವೈರಲ್ ಆಗಿರುವ ವಿಡಿಯೋ ಆಧಾರದ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರು ಮಂದಿಯನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತ ಯುವಕ ಭಾನುವಾರ ರಾತ್ರಿ ಹತ್ತಿರದ ಹಳ್ಳಿಗೆ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದಾನೆ. ಇದನ್ನು ಗಮನಿಸಿದ ಬಾಲಕಿಯ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಅಷ್ಟೋತ್ತಿಗಾಗಲೇ ಯುವಕನ ಮನೆಯವರಿಗೆ ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿ ಯುವಕನನ್ನು ಬಿಡುವಂತೆ ಕೇಳಿಕೊಂಡಿದ್ದಾರೆ ಈ ವೇಳೆ ಅಲ್ಲಿ ನೆರೆದಿದ್ದ ಗ್ರಾಮಸ್ಥರು ಯುವಕನಿಗೆ ಎಚ್ಚರಿಕೆ ನೀಡಿ ಕಳುಹಿಸುವ ಮುನ್ನ ಬಾಯಿಗೆ ಮೂತ್ರ ಸುರಿದಿದ್ದಾರೆ, ಅಷ್ಟುಮಾತ್ರವಲ್ಲದೆ ಅಲ್ಲಿದ್ದ ಕೆಲವರು ಘಟನೆಯನ್ನು ಚಿತ್ರೀಕರಿಸಿದ್ದಾರೆ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜಸ್ಥಾನ ಪೊಲೀಸರು ಗ್ರಾಮದ ಆರು ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ; ಡಿಕ್ಕಿ ಹೊಡೆದು ವ್ಯಕ್ತಿಯನ್ನು 10 ಕಿ.ಮೀ. ದೂರ ಎಳೆದೊಯ್ದ ಕಾರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next