Advertisement

ರಾಜಸ್ಥಾನದಲ್ಲಿ ವಸುಂಧರಾ ರಾಜೇ ಶಕ್ತಿ ಪ್ರದರ್ಶನ

11:39 PM Mar 05, 2023 | Team Udayavani |

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ರಾಜಸ್ಥಾನದಲ್ಲಿ ಬಿಜೆಪಿ ನಾಯಕಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಭಾನುವಾರ ಬೃಹತ್‌ ಶಕ್ತಿಪ್ರದರ್ಶನ ನಡೆಸಿದ್ದಾರೆ.

Advertisement

ಚುರುವಿನಲ್ಲಿ ನಡೆದ ಈ ಸಾರ್ವಜನಿಕ ರ‍್ಯಾಲಿಯಲ್ಲಿ ಬರೋಬ್ಬರಿ 80 ಸಾವಿರ ಮಂದಿ ಪಾಲ್ಗೊಂಡಿದ್ದು, “ಅಬ್‌ಕೀ ಬಾರ್‌ ವಸುಂಧರಾ ಸರ್ಕಾರ್‌’ ಘೋಷಣೆಗಳು ಮುಗಿಲುಮುಟ್ಟಿದ್ದವು.

ಮೊದಲಿಗೆ ಸಲಾಸಾರ್‌ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಿ, ರಾಜೇ ಪೂಜೆ ಸಲ್ಲಿಸಿದರು. ನಂತರ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡುತ್ತಾ, ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಸೋರಿಕೆ ಸೇರಿದಂತೆ ವಿವಿಧ ವಿಚಾರಗಳನ್ನೆತ್ತಿಕೊಂಡು ಅಶೋಕ್‌ ಗೆಹ್ಲೋಟ್ ಸರ್ಕಾರಕ್ಕೆ ಚಾಟಿ ಬೀಸಿದರು. ಈ ಭರ್ಜರಿ ರ‍್ಯಾಲಿ ಯ ಮೂಲಕ ರಾಜೇ ಅವರು, ತಾವು ರಾಜಸ್ಥಾನದ ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಜತೆಗೆ, ತಮಗಿರುವ ಭಾರೀ ಜನಬೆಂಬಲ ಇದೆ ಎಂಬ ಸಂದೇಶವನ್ನೂ ಹೈಕಮಾಂಡ್‌ಗೆ ರವಾನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next