Advertisement

ಪುನೀತ್ ರಾಜ್ ಕುಮಾರ್ ಕನ್ನಡನಾಡಿನ ಶ್ರೇಷ್ಠ ಪುತ್ರ: ರಾಜೀವ್ ಚಂದ್ರಶೇಖರ್

03:16 PM Nov 05, 2021 | Team Udayavani |

ಬೆಂಗಳೂರು: ಕನ್ನಡಿಗರ ಕಣ್ಮಣಿ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಕನ್ನಡನಾಡಿನ ಶ್ರೇಷ್ಠ ಪುತ್ರ. ಅವರ ಅಗಲುವಿಕೆಯಿಂದ ಕನ್ನಡನಾಡಿಗೆ ಅಪಾರ ನಷ್ಟವಾಗಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿಳಿಸಿದರು.

Advertisement

ಇತ್ತೀಚೆಗೆ ನಿಧನರಾದ ಪುನೀತ್ ರಾಜ್‍ಕುಮಾರ್ ಅವರ ಸದಾಶಿವನಗರದ ಮನೆಗೆ ಇಂದು ಭೇಟಿ ನೀಡಿದ ಸಚಿವರು ಕುಟುಂಬದವರಿಗೆ ಸಾಂತ್ವನ ಹೇಳಿದರು. ಪುನೀತ್ ರಾಜ್‍ಕುಮಾರ್ ಅವರ ಕುಟುಂಬದವರು, ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಅವರು ತಿಳಿಸಿದರು.

ಇದನ್ನೂ ಓದಿ:ಕತ್ತಲೆಯಿಂದ ಹೊರತರುವ ಸಾಮರ್ಥ್ಯ ಕೊಹ್ಲಿಯಲ್ಲಿದೆ: ಅನುಷ್ಕಾ ಭಾವನಾತ್ಮಕ ಪತ್ರ

ಇದೇ ಸಂದರ್ಭದಲ್ಲಿ ಸಚಿವರು ಪುನೀತ್ ಅವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿದರು. ಪುನೀತ್ ಅವರ ಪತ್ನಿ ಅಶ್ವಿನಿ, ನಟರಾದ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next