Advertisement

ನನ್ನನ್ನು ಶೀಘ್ರ ಬಿಡುಗಡೆ ಮಾಡಿ: ರಾಜೀವ್‌ ಹಂತಕಿ ಸುಪ್ರೀಂ ಕೋರ್ಟ್‌ಗೆ ಮನವಿ

10:27 PM Aug 12, 2022 | Team Udayavani |

ನವದೆಹಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌, ತನ್ನ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾಳೆ.

Advertisement

ಈ ಹಿಂದೆ, ಇದೇ ಕಾರಣಕ್ಕಾಗಿ ಇವರು ಮದ್ರಾಸ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಜೂ. 17ರಂದು ಇವರ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್‌, “ಇಂಥ ನಿರ್ಧಾರ ಕೈಗೊಳ್ಳಲು ಹೈಕೋರ್ಟ್‌ಗಳಿಗೆ ಅಧಿಕಾರವಿಲ್ಲ.

ಸಂವಿಧಾನದ 142ನೇ ಪರಿಚ್ಛೇದದಡಿ ಸುಪ್ರೀಂ ಕೋರ್ಟ್‌ ತನ್ನ ವಿಶೇಷಾಧಿಕಾರ ಬಳಸಿಕೊಂಡು ಅವಧಿಪೂರ್ವ ಬಿಡುಗಡೆಗೆ ತೀರ್ಪು ನೀಡಲು ಸಾಧ್ಯವಿದೆ’ ಎಂದು ಹೇಳಿತ್ತು.

ಈ ಹಿನ್ನೆಲೆಯಲ್ಲಿ ನಳಿನಿ, ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next