Advertisement

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ರಾಜೇಶ್ ಜಿ.ವಿ

05:45 PM Feb 19, 2023 | Team Udayavani |

ಉಡುಪಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾಜೀ ಯ ಉಡುಪಿ ಭೇಟಿ ಕಾರ್ಯಕರ್ತರಲ್ಲಿ ನವೋ ಉಲ್ಲಾಸ ಮೂಡಿಸಿದೆ ಎಂದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಹೇಳಿದ್ದಾರೆ.

Advertisement

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು(ಭಾನುವಾರ) ನಡೆದ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುವುದು ಖಚಿತ, ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂದರು. ರಾಷ್ಟ್ರೀಯ ಅಧ್ಯಕ್ಷರ ಈ ಭೇಟಿ ಪಕ್ಷದ ಗೆಲುವಿನ ಅಂತರವನ್ನು ಹೆಚ್ಚಿಸಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ , ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ , ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ , ನವೀನ ಶೆಟ್ಟಿ ಕುತ್ಯಾರ್ ಹಾಗು ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಬೆಳ್ತಂಗಡಿ, ಜಿಲ್ಲಾ ವಕ್ತಾರರಾದ ರಾಘವೇಂದ್ರ ಕಿಣಿ, ಜಿಲ್ಲಾ ಉಪಾಧ್ಯಕರಾದ ಪ್ರಕಾಶ್ ಶೆಟ್ಟಿ ಪಾದಬೆಟ್ಟು ,ಶ್ರೀಶ ನಾಯಕ್ ,ಸುಪ್ರಸಾದ್ ಶೆಟ್ಟಿ , ಗೀತಾಂಜಲಿ ಸುವರ್ಣ, ಜಿಲ್ಲಾ ಮೋರ್ಚಾಗಳು ಅಧ್ಯಕ್ಷರಾದ ವೀಣಾ ಶೆಟ್ಟಿ , ನಿತ್ಯಾನಂದ ನಾಯ್ಕ್, ದಾವೂದ್ ಅಭುಬಕರ್, ರಾಜ್ಯ ಪದಾಧಿಕಾರಿಗಳಾದ ದಿನಕರ್ ಬಾಬು , ಶಿಲ್ಪಾ ಸುವರ್ಣ, ಜಿಲ್ಲಾ ಪದಾಧಿಕಾರಿಗಳಾದ ಶ್ರೀನಿಧಿ ಹೆಗ್ಡೆ, ಸತ್ಯಾನಂದ ನಾಯಕ್, ಸುದೀಪ್ ಶೆಟ್ಟಿ , ಮಹೇಶ್, ಸಚಿನ್ ಪೂಜಾರಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಆರ್‌ಎಸ್ ಶಾಸಕರ ವಿರುದ್ಧ ಹೇಳಿಕೆ; ವೈಎಸ್ ಶರ್ಮಿಳಾ ಪೊಲೀಸ್ ವಶಕ್ಕೆ

Advertisement

 

Advertisement

Udayavani is now on Telegram. Click here to join our channel and stay updated with the latest news.

Next