Advertisement

ಸುರತ್ಕಲ್‌: ಹಣಕ್ಕಾಗಿ ಖಾಸಗಿ ಮಾಹಿತಿ ಬಹಿರಂಗದ ಬೆದರಿಕೆ, ರಾಜೇಶ್‌ ಪವಿತ್ರನ್‌ ಸೆರೆ

09:25 PM Dec 14, 2022 | Team Udayavani |

ಸುರತ್ಕಲ್‌: ಚಿನ್ನ ಹಾಗೂ ಹಣಕ್ಕಾಗಿ ಉದ್ಯಮಿಯೋರ್ವರಿಗೆ ಖಾಸಗೀ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿದ ರಾಜ್ಯ ಹಿಂದೂ ಮಹಾ ಸಭಾದ ರಾಜೇಶ್‌ ಪವಿತ್ರನ್‌(42) ವಿರುದ್ಧ ದೂರು ದಾಖಲಿಸಿಕೊಂಡಿರುವ ಸುರತ್ಕಲ್‌ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Advertisement

ಕಾವೂರು ನಿವಾಸಿ ಸುರೇಶ್‌ ಸುರತ್ಕಲ್‌ನಲ್ಲಿ ರಾಜೇಶ್‌ ಪವಿತ್ರನ್‌ ಜತೆ ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್‌ ಪವಿತ್ರನ್‌ನ ಅವ್ಯವಹಾರಗಳು ಗಮನಕ್ಕೆ ಬಂದುದರಿಂದ ಪಾಲುದಾರಿಕೆಯಿಂದ ಹೊರ ಬರಲು ನಿರ್ಧರಿಸಿದ್ದರು.

ಇದರಿಂದ ಆಕ್ರೋಶಗೊಂಡ ಆರೋಪಿಯು ಸುರೇಶ್‌ ಅವರ ಲ್ಯಾಪ್‌ ಟಾಪ್‌ ವಶಕ್ಕೆ ಪಡೆದು ಹೆಚ್ಚುವರಿ ಹಣ ನೀಡಬೇಕು, ಇಲ್ಲದಿದ್ದಲ್ಲಿ ಅದರಲ್ಲಿದ್ದ ಖಾಸಗೀ ಮಾಹಿತಿ ಬಹಿರಂಗ ಪಡಿಸುತ್ತೇನೆ ಮಾತ್ರವಲ್ಲ ಕೈ, ಕಾಲು ಮುರಿ ಯುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಸುರೇಶ್‌ ಸುರತ್ಕಲ್‌ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ ಪೊಲೀಸರು ಕ್ರಮ ಕೈಗೊಂಡು ರಾಜೇಶ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಗೆ ನೆರವು ನೀಡಿದ ಆರೋಪದಲ್ಲಿ ಡಾ| ಸನಿಜ ಎಂಬಾಕೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೈಕ್ ಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next