Advertisement

ರಾಜಕೀಯಕ್ಕೆ ಬರುವಂತೆ ಒತ್ತಾಯಿಸಬೇಡಿ, ಪ್ರತಿಭಟನೆ ಕೈಬಿಡಿ: ಅಭಿಮಾನಿಗಳಿಗೆ ರಜನಿಕಾಂತ್

01:29 PM Jan 11, 2021 | Team Udayavani |

ಚೆನ್ನೈ: ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿ ನಂತರ ದಿಢೀರನೆ ರಾಜಕೀಯದಿಂದ ಹಿಂದೆ ಸರಿದ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಅಭಿಮಾನಿಗಳ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದು, ಪ್ರತಿಭಟನೆಯ ಮೂಲಕ ಒತ್ತಡ ಹೇರಿ ನನಗೆ ಪದೇ, ಪದೇ ನೋವು ಕೊಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Advertisement

ರಾಜಕೀಯ ಪ್ರವೇಶಿಸುವುದಿಲ್ಲ ಎಂಬ ಹೇಳಿಕೆಯನ್ನು ಖಂಡಿಸಿ, ತಮ್ಮ ನಿಲುವು ಬದಲಾಯಿಸುವಂತೆ ಒತ್ತಾಯಿಸಿ ರಜನಿಕಾಂತ್ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು.

ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದಿರುವ ಬಗ್ಗೆ ನಾನು ವಿಸ್ತೃತವಾಗಿ ಕಾರಣವನ್ನು ಹೇಳಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯ ನಡೆಸಿ ರಾಜಕೀಯಕ್ಕೆ ಬರುವಂತೆ ಒತ್ತಡ ಹೇರಿ ಪದೇ, ಪದೇ ನನಗೆ ನೋವು ಕೊಡಬೇಡಿ ಎಂದು ರಜನಿಕಾಂತ್ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಜನಿ ಮಕ್ಕಳ್ ಮಂಡ್ರಂನ ಕೆಲವು ಉಚ್ಚಾಟಿತ ಸದಸ್ಯರು ನನ್ನ ಅಭಿಮಾನಿಗಳ ಜತೆ ಸೇರಿ ಚೆನ್ನೈನಲ್ಲಿ ನಾನು ರಾಜಕೀಯ ಪ್ರವೇಶಿಸುವುದಿಲ್ಲ ಎಂಬ ನಿರ್ಧಾರದ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ನನ್ನ ನಿರ್ಧಾರ ತೆಗೆದುಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಯಾರೂ ಕೂಡಾ ಪ್ರತಿಭಟನೆ ನಡೆಸಿ ನನ್ನ ಮನಸ್ಸನ್ನು ನೋಯಿಸಬಾರದು ಎಂದು ರಜನಿಕಾಂತ್ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next