Advertisement

ರಾಜಕೀಯ ಪ್ರವೇಶದ ಕುರಿತು ಅತೀ ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್

07:34 PM Nov 30, 2020 | sudhir |

ಚೆನ್ನೈ : ತಾನು ರಾಜಕೀಯಕ್ಕೆ ಪ್ರವೇಶಿಸುವ ಕುರಿತು ಅತೀ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿಕೆ ನೀಡಿದ್ದಾರೆ.

Advertisement

ಚೆನ್ನೈ ನ ಕಲ್ಯಾಣ ಮಂಟಪದಲ್ಲಿ ನಡೆದ ‘ರಜನಿ ಮಕ್ಕಳ್ ಮಂದಿರಂ’ನ ಜಿಲ್ಲಾ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ರಾಜಕೀಯ ಪ್ರವೇಶದ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸೂಪರ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾದಿದ್ದರು ಆದರೆ ಸಭೆಯಲ್ಲಿ ರಾಜಕೀಯ ಪ್ರವೇಶದ ಕುರಿತು ಯಾವುದೇ ವಿಚಾರ ಪ್ರಕಟಿಸದ ರಜನಿಕಾಂತ್ ಮಾಧ್ಯಮದವರೊಂದಿಗೆ ಮಾತನಾಡಿ ‘ರಜನಿ ಮಕ್ಕಳ್ ಮಂಡ್ರಮ್‌’ನ ಜಿಲ್ಲಾ ಕಾರ್ಯದರ್ಶಿಗಳು ತಮ್ಮ ಯೋಜನೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಾನು ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೆ ಬೆಂಬಲ ನೀಡುವುದಾಗಿ ತಿಳಿದಿದ್ದಾರೆ ಎಂದು ಹೇಳಿದ್ದಾರೆ ಅಲ್ಲದೆ ನನ್ನ ರಾಜಕೀಯ ಪ್ರವೇಶದ ಕುರಿತು ಶೀಘ್ರವಾಗಿ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ತಿಳಿಸಿದ್ದಾರೆ

ಇದನ್ನೂ ಓದಿ:ಪ್ರತಿಭಟನಾ ನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಿರುವುದು ಕ್ರೂರತನ : ಶಿವಸೇನೆ ಆಕ್ರೋಶ

ತಮಿಳುನಾಡಿನಲ್ಲಿ ಮುಂಬರುವ 2021ರ ವಿಧಾನ ಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶಿಸುವುದು ಭಾರಿ ಕುತೂಹಲ ಮೂಡಿದೆ. ಸೂಪರ್ ಸ್ಟಾರ್ ರಾಜಕೀಯ ಸೇರುತ್ತಾರೋ, ಇಲ್ಲವೋ ಎಂಬುದು ಅವರ ನಿರ್ಧಾರದ ಮೇಲಿದೆ.

Advertisement

Udayavani is now on Telegram. Click here to join our channel and stay updated with the latest news.

Next