Advertisement

ರಾಜೀವ್‌ ಹಂತಕರ ಬಿಡುಗಡೆಗೆ ವಿರೋಧ

07:41 AM Aug 11, 2018 | Team Udayavani |

ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರನ್ನು ಬಿಡುಗಡೆ ಗೊಳಿಸುವಂತೆ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ತನ್ನ ಅಭಿಪ್ರಾಯ ಸಲ್ಲಿಸಿದೆ. ಹಂತಕರನ್ನು ಒಂದೊಮ್ಮೆ ಬಿಡುಗಡೆ ಮಾಡಿದ್ದೇ ಆದಲ್ಲಿ ಅದು ಅಪಾಯಕ್ಕೆ ಮುನ್ನುಡಿ ಬರೆದಂತೆ ಎಂದು ಹೇಳಿದೆ. ಜತೆಗೆ, ಅಂತಾರಾಷ್ಟ್ರೀಯ ಪರಿಣಾಮವನ್ನೂ ಎದುರಿಸಬೇಕಾದೀತು ಎಂದಿದೆ.

Advertisement

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ದಾಖಲೆಗಳನ್ನೂ ಲಗತ್ತಿಸಿದೆ. ಹೀಗಾಗಿ ಅರ್ಜಿ ವಿಚಾರಣೆ ಯನ್ನು ನ್ಯಾಯಪೀಠ ಮುಂದೂಡಿದೆ. ಕಳೆದ ಜನವರಿ 23ರಂದು ನಡೆದ ವಿಚಾರಣೆ ಸಂದರ್ಭ ಸುಪ್ರೀಂಕೋರ್ಟ್‌, ಏಳು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಿದರೆ ಏನಾದೀತು ಎಂಬ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಸೂಚಿಸಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next