Advertisement

ಕಾಶ್ಮೀರದಲ್ಲಿ ವರ್ಷಾಂತ್ಯಕ್ಕೆ ಚುನಾವಣೆ? ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸುಳಿವು

08:50 PM Jun 17, 2022 | Team Udayavani |

ಜಮ್ಮು: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದಿದ್ದಾರೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

Advertisement

ಜಮ್ಮುವಿನಲ್ಲಿ ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರ ಮರುವಿಂಗಡಣೆ ಕಾರ್ಯ ಸೂಸೂತ್ರವಾಗಿ ಪೂರ್ಣಗೊಂಡಿದ್ದು ಅದರನುಸಾರ ರಾಜ್ಯದ ವಿಧಾನಸಭಾ ಕ್ಷೇತ್ರಗಳನ್ನು 90ಕ್ಕೆ ಹೆಚ್ಚಿಸಲಾಗಿದೆ.

ಅದರಲ್ಲಿ ಕಾಶ್ಮೀರಕ್ಕೆ 47 ಸ್ಥಾನ ಹಾಗೂ ಜಮ್ಮುಗೆ 43 ಸ್ಥಾನಗಳು ಲಭ್ಯವಾಗಲಿದೆ ಎಂದರು. ಕ್ಷೇತ್ರ ಮರುವಿಂಗಡಣಾ ಸಮಿತಿಯು ಸಲ್ಲಿಸಿರುವ ವರದಿಯ ಪರಿಷ್ಕರಣಾ ಕಾರ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದ್ದು, ಆ. 31ರ ಹೊತ್ತಿಗೆ ಪರಿಷ್ಕೃತಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಕರಡು ಪಟ್ಟಿ ಸಿದ್ಧವಾಗುವ ಸಾಧ್ಯತೆಯಿದೆ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next