Advertisement

Rajya Sabha ಅಡ್ಡಮತ; ಉ.ಪ್ರ.: 8ರಲ್ಲಿ ಬಿಜೆಪಿ, 2ರಲ್ಲಿ ಎಸ್‌ಪಿಗೆ ಜಯ

01:11 AM Feb 28, 2024 | Team Udayavani |

ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಎಸ್‌ಪಿಯ 8 ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಹೇಳಲಾಗಿದೆ.

Advertisement

ಒಟ್ಟು 10 ಸ್ಥಾನಗಳ ಪೈಕಿ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ಇನ್ನೊಂದೆಡೆ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಸರಕಾರಕ್ಕೆ 25 ಶಾಸಕರ ಬಲ ಇದ್ದರೂ ಪಕ್ಷದ ಅಭ್ಯರ್ಥಿ ಅಭಿಷೇಕ್‌ ಮನುಸಿಂ Ì ಸೋತಿದ್ದಾರೆ. ಬಿಜೆಪಿಯ ಅಭ್ಯರ್ಥಿ ಹರ್ಷ ಮಹಾಜನ್‌ ಜಯ ಸಾಧಿಸಿದ್ದಾರೆ.

ಹಿಮಾಚಲ ಸರಕಾರ ವಿರುದ್ಧ ಬಿಜೆಪಿ ಅವಿಶ್ವಾಸ?
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ 9 ಶಾಸಕರು ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ವಿಪಕ್ಷ ಬಿಜೆಪಿ ಸುಖ್ವಿಂದರ್ ಸಿಂಗ್‌ ಸುಖು ನೇತೃತ್ವದ ಕಾಂಗ್ರೆಸ್‌ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಅಡ್ಡ ಮತದಾನದಿಂದ ಉಂಟಾಗಿರುವ ರಾಜಕೀಯ ಸನ್ನಿವೇಶವನ್ನು ತನಗೆ ಅನುಕೂಲಕರವಾಗಿ ಪರಿವರ್ತಿಸಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next