Advertisement

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

03:32 PM May 30, 2022 | Team Udayavani |

ಬೆಂಗಳೂರು : ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೈರಾಮ್ ರಮೇಶ್ , 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ,ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.

Advertisement

ಆ ಬಳಿಕ ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಜ್ಜನ ರಾಜಕಾರಣಿ ಜೈರಾಮ್ ರಮೇಶ್. ಯುವಕನಿಗೆ ಎರಡನೇ ಅಭ್ಯರ್ಥಿಯನ್ನಾಗಿ ಅವಕಾಶ ಕೊಟ್ಟಿದ್ದೇವೆ. ಎರಡನೇ ಅಭ್ಯರ್ಥಿ ಹಾಕುವ ವಿಚಾರವನ್ನು ಪಕ್ಷ,ನಮ್ಮ ನಾಯಕರು ತೀರ್ಮಾನ ಮಾಡಿದ್ದಾರೆ.ಜೆಡಿಎಸ್ ನವರು ಬಂದು ಕೇಳಿದ್ದಾರೆ. ನಾವು ಅವರನ್ನ ಬೆಂಬಲ ಕೇಳಿದ್ದೇವೆ.ಆತ್ಮ ಸಾಕ್ಷಿಗೆ ಅನುಗುಣವಾಗಿ ಶಾಸಕರು ಮತದಾನ ಮಾಡುತ್ತಾರೆ ಎಂದರು.

ಪ್ರಜಾಪ್ರಭುತ್ವದ ಮೇಲೆ ನಾವು ನಂಬಿಕೆ ಇಟ್ಟುಕೊಂಡಿದ್ದೇವೆ. ಪಕ್ಷ, ನಮ್ಮ ನಾಯಕರು ಹಾಗೂ ದೆಹಲಿ ವರಿಷ್ಠರು ಏನು ನಿರ್ಧಾರ ಕೈಗೊಳ್ಳುತ್ತಾರೋ ಅದನ್ನು ಪಾಲಿಸುವುದು ನನ್ನ ಕರ್ತವ್ಯ ಎಂದರು.

ಜೈರಾಂ ರಮೇಶ್ ಕೊಡುಗೆ ಏನು ಎಂಬ ಪ್ರಶ್ನೆಗೆ ಉತ್ತರಿಸಿ , ಕರ್ನಾಟಕ ಮೂಲದವರು, ಇಡೀ ರಾಷ್ಟ್ರಕ್ಕೆ ಪಕ್ಷದ ಮೂಲಕ ಉತ್ತಮ ಕೊಡುಗೆ ನೀಡಿದ್ದಾರೆ. ನಿಮ್ಮ ಕಣ್ಣಿಗೆ ಕಾಣದೇ ಇರಬಹುದು. ಆದರೆ ಹಿನ್ನಲೆಯಲ್ಲಿ ಇದ್ದುಕೊಂಡೇ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು.

ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿ ಮನ್ಸೂರ್ ಖಾನ್ ಮಾತನಾಡಿ, ಹೈಕಮಾಂಡ್ ತೀರ್ಮಾನದಂತೆ ನಾಮಪತ್ರ ಸಲ್ಲಿಕೆ ಮಾಡಿರುವೆ .ನನಗೆ ಗೆಲ್ಲುವ ವಿಶ್ವಾಸವಿದೆ. ಜೆಡಿಎಸ್ ಬೆಂಬಲ ಪಡೆಯುವ ವಿಚಾರವಾಗಿ ಬಗ್ಗೆ ಹಿರಿಯರು ಮಾತನಾಡುತ್ತಾರೆ  ಎಂದರು.

Advertisement

ಇದನ್ನೂ ಓದಿ : ಪಾಶ್ಚಿಮಾತ್ಯ ಸಂಸ್ಕೃತಿ ಅನುಸರಿಸಿದರೆ ಬದುಕಿನಲ್ಲಿ ನೆಮ್ಮದಿಯಿಲ್ಲ: ಪ್ರಹ್ಲಾದ್ ಜೋಷಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಮನ್ಸೂರ್ ಖಾನ್ ಹರಕೆಯ ಕುರಿಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಮನ್ಸೂರ್ ಖಾನ್ ನಿಷ್ಟಾವಂತ ಕಾರ್ಯಕರ್ತ. ಒಬ್ಬ ಉತ್ಸಾಹಿ‌ ಯುವ ನಾಯಕ. ಹಾಗಾಗಿ ಅವರಿಗೂ ಅವಕಾಶ ನೀಡಲಾಗಿದೆ. ಇವತ್ತು ಮಾತನಾಡುತ್ತೇವೆ,ನೋಡೋಣ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next