Advertisement

ರಾಜ್ಯಸಭೆ ಆಫರ್‌ ನೀಡಿಲ್ಲ: ಯದುವೀರ್‌

06:50 AM Apr 02, 2018 | Team Udayavani |

ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜಮಾತೆ ಪ್ರಮೋದಾದೇವಿ ಮತ್ತು ತಮ್ಮನ್ನು ಭೇಟಿ ಮಾಡಿದ್ದರು. ಆದರೆ ಪ್ರಮೋದಾದೇವಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ಯಾವುದೇ ರೀತಿಯ ಆಫರ್‌ ನೀಡಿಲ್ಲ ಎಂದು ಮೈಸೂರು ರಾಜ ವಂಶಸ್ಥ ಯದುವೀರ್‌ ಸ್ಪಷ್ಟಪಡಿಸಿದ್ದಾರೆ.

Advertisement

ಭಾನುವಾರ ಸಂಜೆ ಚಿತ್ರದುರ್ಗ ಕೋಟೆ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಾವುದೇ
ಕಾರಣಕ್ಕೂ ರಾಜಕೀಯ ಕ್ಷೇತ್ರ ಪ್ರವೇಶಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಜನರು ಬಯಸಿದರೆ ಮುಂದೆ
ರಾಜಕೀಯಕ್ಕೆ ಬರುತ್ತೇನೆ. ಸದ್ಯಕ್ಕೆ ರಾಜಕೀಯ ನನ್ನ ಆಯ್ಕೆ ಅಲ್ಲ ಎಂದರು.

ಅಮಿತ್‌ ಶಾ ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅರಮನೆಗೆ ಆಗಮಿಸಿ ತಮ್ಮೊಂದಿಗೆ ಮಾತುಕತೆ ನಡೆಸಿದ್ದ ಸತ್ಯ. ಆದರೆ ಪಕ್ಷಕ್ಕೆ ಆಹ್ವಾನ ಹಾಗೂ ಪ್ರಮೋದಾದೇವಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ವಿಷಯ ಮಾತನಾಡಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next