Advertisement

ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ಪರಾಜಿತ ಅಭ್ಯರ್ಥಿ

07:20 AM Aug 19, 2017 | Karthik A |

ಅಹಮದಾಬಾದ್‌: ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಹ್ಮದ್‌ ಪಟೇಲ್‌ ವಿರುದ್ಧ ಸ್ಪರ್ಧಿಸಿ ಸೋತ ಬಿಜೆಪಿ ಅಭ್ಯರ್ಥಿ ಬಲ್ವಂತ್‌ಸಿನ್ಹ ರಜಪೂತ್‌ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಚುನಾವಣಾ ಫ‌ಲಿತಾಂಶದ ದಿನ ಕಾಂಗ್ರೆಸ್‌ನ ಇಬ್ಬರು ಬಂಡಾಯ ಶಾಸಕರ ಮತಗಳನ್ನು ಚುನಾವಣಾ ಆಯೋಗವು ಅಸಿಂಧುಗೊಳಿಸಿದ್ದನ್ನು ಪ್ರಶ್ನಿಸಿ ಅವರು ಗುಜರಾತ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಒಂದು ಬಾರಿ ಚುನಾವಣಾ ಅಧಿಕಾರಿಯು ಆ ಎರಡೂ ಮತಗಳನ್ನು ಸಿಂಧು ಎಂದು ಒಪ್ಪಿಕೊಂಡ ಬಳಿಕ, ಅದನ್ನು ಅಸಿಂಧು ಎಂದು ಘೋಷಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ. ಬಂಡಾಯ ಶಾಸಕರು ಮತದಾನದ ಬಳಿಕ ಮತಪತ್ರಗಳನ್ನು ಬಿಜೆಪಿಯ ಪ್ರತಿನಿಧಿಗೆ ತೋರಿಸಿದ್ದರು. ಇದು ನಿಯಮಬಾಹಿರವಾಗಿದ್ದು, ಅವರ ಮತಗಳನ್ನು ಅಮಾನ್ಯಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಹಲವು ಹೈಡ್ರಾಮಾಗಳ ಬಳಿಕ ಆಯೋಗವು ಮತಗಳನ್ನು ಅಸಿಂಧು ಎಂದು ಘೋಷಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next