Advertisement

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ನಾಯಕರ ಭೇಟಿಯಾದ ಜೆಡಿಎಸ್ ನ ಕುಪೇಂದ್ರ ರೆಡ್ಡಿ

12:52 PM May 29, 2022 | Team Udayavani |

ಬೆಂಗಳೂರು : ರಾಜ್ಯಸಭಾ ಸ್ಥಾನದ ಗೆಲುವಿಗಾಗಿ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ಅವರು ಕಸರತ್ತು ಆರಂಭಿಸಿದ್ದು, ಭಾನುವಾರ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

Advertisement

ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್ ರಾಜ್ಯಸಭಾ ಟಿಕೆಟ್ ನೀಡಲು ನಿರ್ಧರಿಸಿದ್ದು, ಅವರು ಗೆಲ್ಲಲು ಹೆಚ್ಚುವರಿ ಮತಗಳ ಅವಶ್ಯಕತೆ ಇದೆ. ಕಾಂಗ್ರೆಸ್ ಅಥವಾ ಬಿಜೆಪಿಯ ಶಾಸಕರ ಬೆಂಬಲದ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ : ಹುಬ್ಬಳ್ಳಿ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next