Advertisement

ರಾಜ್ಯಸಭೆ ಚುನಾವಣೆ, ನೋಟಾ ಬೇಡ, ಕೈ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

03:59 PM Aug 02, 2017 | Sharanya Alva |

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮೊದಲ ಬಾರಿಗೆ ರಾಜ್ಯಸಭಾ ಚುನಾವಣೆಯಲ್ಲಿ ನೋಟಾ ಆಯ್ಕೆಯನ್ನು ಬಳಸಲು ನಿರ್ಧರಿಸಿರುವ ಕ್ರಮವನ್ನು ಪ್ರಶ್ನಿಸಿ ಗುಜರಾತ್ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಬುಧವಾರ ಹಸಿರು ನಿಶಾನೆ ತೋರಿದೆ.

Advertisement

ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ನೋಟಾ ಬಳಕೆಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಪೀಠದ ಜಸ್ಟೀಸ್ ದೀಪಕ್ ಮಿಶ್ರಾ ಸಹಮತ ಸೂಚಿಸಿದರು.  ಗುರುವಾರದಿಂದ ಅರ್ಜಿ ವಿಚಾರಣೆ ಆರಂಭಿಸುವುದಾಗಿ ಪೀಠ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next