Advertisement
ನವೆಂಬರ್ 1ರಂದು ನಡೆಯುವ 64ನೇ ಕನ್ನಡ ರಾಜ್ಯೋತ್ಸವಕ್ಕೆ ಪ್ರಶಸ್ತಿ ನೀಡುವಂತೆ ಈಗಾಗಲೇ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪುರಸ್ಕೃತರ ಆಯ್ಕೆ ಕುರಿತಂತೆ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿದ್ದು, ಪ್ರಶಸ್ತಿ ಪುರಸ್ಕೃತರ ವಯೋಮಿತಿಯನ್ನು 60 ವರ್ಷದಿಂದ ಕಡಿಮೆ ಮಾಡುವ ಹಾಗೂ ರಾಜ್ಯೋತ್ಸವದ ವರ್ಷದಷ್ಟೇ ಪ್ರಶಸ್ತಿ ಪುರಸ್ಕೃತರ ಸಂಖ್ಯೆ ನಿಗದಿಪಡಿಸುವ ನಿಯಮ ಸಡಿಲಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
Related Articles
Advertisement
ಆ ಪಟ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಉಪ ಮುಖ್ಯಮಂತ್ರಿಗಳು, ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಹಿರಿಯ ಸಾಹಿತಿಗಳು ಸೇರಿ 17 ಸದಸ್ಯರನ್ನೊಳಗೊಂಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಸಲ್ಲಿಸಲಿದೆ. ನಂತರ, ಅಂತಿಮ ಆಯ್ಕೆ ನಡೆಯಲಿದೆ.
ಮಾನದಂಡ ರೂಪಿಸುವಂತೆ ಸೂಚನೆ: 2015ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ತಮ್ಮ ಸೇವೆಯನ್ನು ಪರಿಗಣಿಸದೆ ನಿರ್ಲಕ್ಷ್ಯ ಮಾಡಿದೆ ಎಂದು ಸಾಹಿತಿ ಬಿ.ವಿ. ಸತ್ಯ ನಾರಾಯಣ ಎನ್ನುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ, ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಯಾವುದೇ ಮಾನದಂಡ ಇಲ್ಲ ಎಂದು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅವರ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸೂಕ್ತ ಮಾನದಂಡ ರೂಪಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿತ್ತು.
ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ 2016ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಹಿರಿಯ ಸಾಹಿತಿಗಳನ್ನೊಳಗೊಂಡ ಸಮಿತಿ ರಚಿಸಿ, ಪ್ರಶಸ್ತಿ ಆಯ್ಕೆ ಕುರಿತ ಮಾನದಂಡ ರೂಪಿಸುವಂತೆ ಸೂಚಿಸಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸೂಕ್ತ ನಿಯಮಗಳನ್ನು ಶಿಫಾರಸು ಮಾಡಿ, ರಾಜ್ಯ ಸರ್ಕಾರಕ್ಕೆ ವರದಿ ನೀಡಿತ್ತು. ಆ ವರದಿಯ ಆಧಾರದಲ್ಲಿಯೇ ರಾಜ್ಯ ಸರ್ಕಾರ ಪ್ರಶಸ್ತಿ ನೀಡುತ್ತ ಬರುತ್ತಿದೆ.
* ಶಂಕರ ಪಾಗೋಜಿ