Advertisement

ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?

06:14 PM Dec 09, 2021 | Team Udayavani |

ಮುಂಬಯಿ: ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶದನ ಬಹುನಿರೀಕ್ಷಿತ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ತೆಲುಗು ಸ್ಟಾರ್ ನಟ ರಾಮ್ ಚರಣ್ ಗೈರುಹಾಜರಾಗಿದ್ದಾರೆ. ಅದಕ್ಕೆ ಕಾರಣ ರಾಮ್ ಚರಣ್ ಕುಟುಂಬದ ವಿವಾಹ ಸಮಾರಂಭವೊಂದರಲ್ಲಿ ಭಾಗಿಯಾಗಿರುವುದು ಎಂದು ಹೇಳಿದೆ.

Advertisement

ಇದನ್ನೂ ಓದಿ:ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಗುರುವಾರ ಎಸ್.ಎಸ್.ರಾಜಮೌಳಿಯ “ಆರ್ ಆರ್ ಆರ್” ಟ್ರೈಲರ್ ಬಿಡುಗಡೆಯಾದ ನಂತರ ಸಿನಿಪ್ರಿಯರು ಹಾಗೂ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆಂಧ್ರಪ್ರದೇಶದಲ್ಲಿ ಟ್ರೈಲರ್ ಬಿಡುಗಡೆ ವೀಕ್ಷಿಸಲು ವ್ಯವಸ್ಥೆ ಮಾಡಿಕೊಡಲಾಗಿತ್ತು.

ಸಿನಿಮಾ ನಟರು ಹಾಗೂ ಸಿಬಂದಿಗಳು ಮುಂಬಯಿಗೆ ತೆರಳಿದ್ದು, ಈ ಸಂದರ್ಭದಲ್ಲಿ ಬಾಲಿವುಡ್ ಮಾಧ್ಯಮಗಳ ಜತೆ ಸಂವಾದ ಕೂಡಾ ನಡೆಸಿತ್ತು. ಈ ವೇಳೆಯಲ್ಲಿ ಆರ್ ಆರ್ ಆರ್ ಹೀರೋ ಜ್ಯೂ.ಎನ್ ಟಿಆರ್ ಕೂಡಾ ಉಪಸ್ಥಿತರಿದ್ದರು. ಆದರೆ ಕುಟುಂಬದ ವಿವಾಹ ಕಾರ್ಯಕ್ರಮಕ್ಕೆ ರಾಮ್ ಚರಣ್ ಹಾಜರಾಗಿದ್ದರಿಂದ ಮುಂಬಯಿಯಲ್ಲಿ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಗೈರುಹಾಜರಾಗುವಂತಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪ್ರಮುಖ ನಗರಗಳಲ್ಲಿ ಆರ್ ಆರ್ ಆರ್ ಸಿನಿಮಾದ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಸಿನಿಮಾ ತಂಡ ಹೇಳಿದೆ. ಬಿಗ್ ಬಜೆಟ್ ನ ಆರ್ ಆರ್ ಆರ್ ಸಿನಿಮಾದಲ್ಲಿ ಜ್ಯೂ.ಎನ್ ಟಿಆರ್, ರಾಮ್ ಚರಣ್, ಅಜಯ್ ದೇವಗನ್, ಅಲಿಯಾ ಭಟ್ ಹಾಗೂ ಇತರರು ಮುಖ್ಯ ಭೂಮಿಕೆಯಲ್ಲಿದ್ದಾರೆ. 2022ರ ಜನವರಿ 7ರಂದು ತೆಲುಗು, ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ತೆರೆಕಾಣಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next