Advertisement
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ರಾಜಕೀಯ ಮಾಡುತ್ತಿರುವುದು ಅವರು. ಇವರು ಅಕ್ಕಿಯನ್ನು ತಮ್ಮ ಸ್ವಗ್ರಾಮ ದೊಡ್ಡ ಆಲದಹಳ್ಳಿಯಲ್ಲಿ ಬೆಳೆದು ಕಳಿಸಿ ಕೊಟ್ಟಿದ್ದಾರೆಯೇ ಎಂದು ಡಿಕೆಶಿ ವಿರುದ್ದ ವಾಗ್ಧಾಳಿ ನಡೆಸಿದರು.
-ಎಚ್.ಡಿ.ಕುಮಾರಸ್ವಾಮಿ,
ಮಾಜಿ ಮುಖ್ಯಮಂತ್ರಿ
Related Articles
ಬೆಂಗಳೂರು: ಅನ್ನಭಾಗ್ಯ ಅಕ್ಕಿಯಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ತಯಾರಿಸಿದ್ದಾರೆಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದು, ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ ಎಂದು ತಿರುಗೇಟು ನೀಡಿದ್ದಾರೆ.
Advertisement
ಈ ಸಂಬಂಧ ಪಡಿತರ ರಶೀದಿಯನ್ನು ಸಾಮಾಜಿಕ ಜಾಲತಾಣ “ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಅನ್ನಭಾಗ್ಯದ ಅಕ್ಕಿಯಲ್ಲಿ ಶ್ರೀರಾಮನ ಮಂತ್ರಾಕ್ಷತೆ ನೀಡಲಾಗುತ್ತಿದೆ ಎಂದು ಸುಳ್ಳು ಹೇಳುತ್ತೀರಲ್ಲ, ನಿಮ್ಮನ್ನು ಆ ಶ್ರೀರಾಮ ಮೆಚ್ಚುವನೇ? ತಮ್ಮ ಗ್ಯಾರಂಟಿಗಳ ಬಂಡವಾಳ ಬಯಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಸರಕಾರ ಒಂದು ಕೆಜಿ ಅಕ್ಕಿಯನ್ನೂ ಪುಕ್ಕಟೆಯಾಗಿ ನೀಡಿಲ್ಲ: ಪ್ರಹ್ಲಾದ ಜೋಷಿಬೆಂಗಳೂರು: ಅನ್ನಭಾಗ್ಯದ ಅಕ್ಕಿಯಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ತಯಾರಿಸಲಾಗಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಸರಕಾರ ಒಂದು ಕೆಜಿ ಅಕ್ಕಿಯನ್ನೂ ಪುಕ್ಕಟೆಯಾಗಿ ನೀಡಿಲ್ಲ ಎಂದಿದ್ದಾರೆ. ಜತೆಗೆ ಕೇಂದ್ರದ ಜತೆಗೆ ಕರಸಮರಕ್ಕೆ ಮುಂದಾಗಿರುವ ರಾಜ್ಯದ ವಾದಕ್ಕೆ ತಿರುಗೇಟು ನೀಡಿದ್ದಾರೆ. ಸರಕಾರದ ಸಚಿವರಿಗೆ ಸುಳ್ಳು ಹೇಳುವುದು ಮತ್ತು ತುಷ್ಟೀಕರಣದ ರಾಜಕೀಯ ಅತ್ಯಂತ ಸಹಜವಾಗಿದೆ ಎಂದರು.