Advertisement

Ram Mandir ಎಡಿಟ್ ಮಾಡಿದ ಚಿತ್ರ ಪೋಸ್ಟ್: ಧಾರವಾಡದಲ್ಲಿ ಯುವಕನ ಬಂಧನ

08:45 PM Jan 24, 2024 | Team Udayavani |

ಧಾರವಾಡ : ಅಯೋಧ್ಯೆಯ ಶ್ರೀರಾಮಮಂದಿರದ ಮೇಲೆ ಹಸಿರು ಧ್ವಜ ಹಾರಿಸುವಂತೆ ಎಡಿಟ್ ಮಾಡಿದ ಪೋಟೋ ಸ್ಟೇಟಸ್ ಹಾಕಿಕೊಂಡ ಯುವಕನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂ ಹುಸೇನ್ ಇಸ್ಮಾಯಿಲ್ ಸಾಬ್ ನದಾಫ್ ಎಂಬ ಯುವಕ ಈ ಕೃತ್ಯ ಎಸಗಿದವನು. ಈತ ಅಯೋಧ್ಯೆ ಶ್ರೀರಾಮಮಂದಿರದ ಮೇಲೆ ಹಸಿರು ಧ್ವಜ ಹಾರಿಸಿರುವಂತೆ ಎಡಿಟ್ ಮಾಡಿದ ಪೋಟೋವನ್ನು ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದಲ್ಲದೇ, ಇಸ್ಲಾಮಿಕ್ ಪವರ್ ತೋರಿಸುತ್ತೇವೆ ಎಂದು ಬರೆದುಕೊಂಡಿದ್ದಾನೆ.

ಇದು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಸ್ಟೇಟಸ್ ಎಂದು ಗರಗ ಠಾಣೆ ಪೊಲೀಸರೇ ಸ್ವಯಂ ದೂರು ದಾಖಲಿಸಿಕೊಂಡು, ವಶಕ್ಕೆ ಪಡೆದಿದ್ದಾರೆ. ಈ ಕೃತ್ಯವನ್ನು ಹಿಂದೂ ಪರ ಸಂಘಟನೆಗಳು ಖಂಡಿಸಿದಲ್ಲದೇ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next