Advertisement

Ayodhya ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಮೋದಿಯ ಸಮಾರಂಭ: ರಾಹುಲ್ ಟೀಕೆ

05:08 PM Jan 16, 2024 | Team Udayavani |

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಾ ಪ್ರಹಾರ ಮುಂದುವರಿಸಿದ್ದು, “ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಮೋದಿಯ ಕಾರ್ಯಕ್ರಮ” ಎಂದಿದ್ದಾರೆ.

Advertisement

ಭಾರತ್ ಜೋಡೋ ನ್ಯಾಯ್ ಯಾತ್ರಾದಲ್ಲಿ ಭಾಗವಹಿಸಿರುವ ಅವರು, ಆರ್ ಎಸ್ಎಸ್ ಮತ್ತು ಬಿಜೆಪಿಯು ಜನವರಿ 22ರ ಕಾರ್ಯಕ್ರಮವನ್ನು ಸಂಪೂರ್ಣ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವಾಗಿ ಮಾಡಿದೆ. ಇದು ಆರ್ ಎಸ್ಎಸ್- ಬಿಜೆಪಿ ಕಾರ್ಯಕ್ರಮ. ಬಹುಶಃ ಇದಕ್ಕೆ ಕಾಂಗ್ರೆಸ್ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದಿರುವುದು” ಎಂದು ರಾಹುಲ್ ಹೇಳಿದರು.

“ನಾವು ಎಲ್ಲಾ ಧರ್ಮೀಯರಿಗೆ, ಎಲ್ಲಾ ಆಚರಣೆಗಳಿಗೆ ಮುಕ್ತರಾಗಿದ್ದೇವೆ. ಹಿಂದೂ ಧರ್ಮದ ಹಿರಿಯ ಮುಖಂಡರೂ ಕೂಡಾ ಜನವರಿ 22ರ ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದಾರೆ” ಎಂದು ರಾಹುಲ್ ಟೀಕಿಸಿದರು.

ಇದನ್ನೂ ಓದಿ:Shimoga; ಪ್ರೇಮಿಗಳ ನಡುವೆ ಕಿರಿಕ್; ಯುವತಿಗೆ ಚಾಕುವಿನಿಂದ ಇರಿದ ಯುವಕ

“ಭಾರತದ ಪ್ರಧಾನ ಮಂತ್ರಿ ಮತ್ತು ಆರ್ ಎಸ್ಎಸ್ ಸುತ್ತಲೂ ಚಿತ್ರಿಸಲಾಗಿರುವ ರಾಜಕೀಯ ಕಾರ್ಯಕ್ರಮವೊಂದಕ್ಕೆ ನಮಗೆ ಹೋಗಲು ಕಷ್ಟವಾಗುತ್ತದೆ” ಎಂದು ರಾಹುಲ್ ಹೇಳಿದರು.

Advertisement

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ಅಧಿರ್ ರಂಜನ್ ಚೌಧರಿ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನವನ್ನು ನಿರಾಕರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next