Advertisement

ಮಂದಿರ ನಿರ್ಮಿಸಿ ಮುಸ್ಲಿಮರಿಗೆ ನೆಮ್ಮದಿ ಕೊಡಿ

08:00 AM Nov 12, 2018 | Team Udayavani |

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು. ಇದರಿಂದ ಮುಸ್ಲಿಮರು ದೇಶದಲ್ಲಿ ನೆಮ್ಮದಿಯಿಂದ ವಾಸಿಸಬಹುದು ಎಂದು ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥ ಘಯೊರುಲ್‌ ಹಸನ್‌ ರಿಜ್ವಿ ರವಿವಾರ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಿದರೂ ಯಾರೂ ನಮಾಜ್‌ ಮಾಡಲು ತೆರಳುವುದಿಲ್ಲ. ಅಯೋಧ್ಯೆಯಲ್ಲಿನ ರಾಮ ಮಂದಿರವು 100 ಕೋಟಿ ಹಿಂದೂಗಳ ಭಾವನಾತ್ಮಕ ವಿಷಯವಾಗಿದೆ. ಹೀಗಾಗಿ ಅವರು ಮಂದಿರ ನಿರ್ಮಾಣ ಮಾಡಲು ಅವಕಾಶ ನೀಡಬೇಕು ಎಂದಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಅರ್ಜಿ ಸಲ್ಲಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ನ.14ರಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.  

Advertisement

ಒಮ್ಮೆ ಮುಸ್ಲಿಮರು ಅವಕಾಶ ನೀಡಿದರೆ ಮುಂದೆ ಯಾವತ್ತೂ ಈ ವಿವಾದ ಏಳುವುದಿಲ್ಲ. ಸದ್ಯ ಮುಸ್ಲಿಂ ಸಮುದಾಯವು ಭೀತಿಯಲ್ಲಿ ಬದುಕುತ್ತಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಕಲ್ಯಾಣ ಸಂಘಟನೆ ಹಾಗೂ ಕೆಲವು ಇತರ ಸಂಸ್ಥೆಗಳು ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next