Advertisement
ರಾಷ್ಟ್ರಪತಿ ಚುನಾವಣಾ ಪ್ರಚಾರಕ್ಕಾಗಿ ದೇಶದ ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುತ್ತಿರುವ ರಾಮನಾಥ ಕೋವಿಂದ್ ಅವರು ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವತಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಸಂಸದರು, ಶಾಸಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಪಾಲ್ಗೊಂಡ ಕೋವಿಂದ್ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.
Related Articles
Advertisement
ಮತಯಾಚನೆಯ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಥಾವರ್ಚಂದ್ ಗೆಹೊÉàಟ್, ಅನಂತಕುಮಾರ್, ಡಿ.ವಿ.ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ, ಸಂಸದ ವಿನೋದ್ ಸೋನ್ಕರ್, ರಾಜ್ಯಸಭೆ ಸದಸ್ಯ ಶಂಸೇದ್ ಸಿಂಗ್, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಬಿಜೆಪಿಯ ಸಂಸದರು, ಶಾಸಕರು, ಬಿಆರ್ಎಸ್ ಕಾಂಗ್ರೆಸ್ನ ಶಾಸಕರು, ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.
ಕೋವಿಂದ್ ಬೆಂಬಲಕ್ಕಿರುವವರುರಾಮ್ನಾಥ್ ಕೋವಿಂದ್ ಅವರಿಗೆ ಬಿಜೆಪಿಯ 17 ಸಂಸದರು, ರಾಜ್ಯಸಭೆಯ ಇಬ್ಬರು ಸದಸ್ಯರು, 44 ಶಾಸಕರ ಬೆಂಬಲವಿದೆ. ಜತೆಗೆ ರಾಜ್ಯಸಭೆ ಪಕ್ಷೇತರ ಸದಸ್ಯ ರಾಜೀವ್ ಚಂದ್ರಶೇಖರ್, ಬಿಆರ್ಎಸ್ ಕಾಂಗ್ರೆಸ್ ಶಾಸಕರಾದ ಪಿ.ರಾಜೀವ್, ತಿಪ್ಪೇಸ್ವಾಮಿ, ಸುರೇಶ್ಬಾಬು ಹಾಗೂ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಬುಧವಾರದ ಸಭೆಯಲ್ಲಿ ಹಾಜರಿದ್ದು, ಬೆಂಬಲ ಸೂಚಿಸಿದ್ದಾರೆ. ಈ ಮಧ್ಯೆ ಕರ್ನಾಟಕ ಮಕ್ಕಳ ಪಕ್ಷದ ಅಶೋಕ್ ಖೇಣಿ ಕೂಡ ರಾಮ್ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಬುಧವಾರದ ಸಭೆಗೆ ರಾಜ್ಯ ವಿಧಾನಸಭೆಯ ಎಲ್ಲಾ ಎಂಟು ಪಕ್ಷೇತರ ಶಾಸಕರಿಗೆ ಆಹ್ವಾನ ನೀಡಲಾಗಿತ್ತಾದರೂ ಬಿ.ನಾಗೇಂದ್ರ ಹೊರತುಪಡಿಸಿ ಬೇರೆ ಯಾರೂ ಬಂದಿರಲಿಲ್ಲ. ಆದರೆ, ಇನ್ನೂ 3 ಅಥವಾ ನಾಲ್ಕು ಶಾಸಕರು ಕೋವಿಂದ್ ಅವರನ್ನು ಬೆಂಬಲಿಸುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ. ಶಿಷ್ಠಾಚಾರಕ್ಕೆ ಆದ್ಯತೆ
ರಾಮ್ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿರುವುದರಿಂದ ಅವರ ಬೆಂಗಳೂರು ಆಗಮನದ ವೇಳೆ ಶಿಷ್ಠಾಚಾರ ಪಾಲಿಸಲು ಆದ್ಯತೆ ನೀಡಲಾಯಿತು. ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದ ಬಿಜೆಪಿಯ ಹಿರಿಯ ನಾಯಕರು ನೇರವಾಗಿ ಖಾಸಗಿ ಹೋಟೆಲ್ಗೆ ಕರೆತಂದರು.