Advertisement

2024ರ ಮಕರ ಸಂಕ್ರಾಂತಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ; ರಾಮಮಂದಿರಕ್ಕೆ 1,800 ಕೋಟಿ ರೂ.

07:19 PM Sep 12, 2022 | Team Udayavani |

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದ ಕಾಮಗಾರಿ 2023ರ ಡಿಸೆಂಬರ್‌ನೊಳಗೆ ಪೂರ್ಣಗೊಳ್ಳಲಿದೆ.

Advertisement

2024ರ ಮಕರ ಸಂಕ್ರಾಂತಿ ಸಮಯಕ್ಕೆ ಗರ್ಭಗುಡಿಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡುವ ಸಾಧ್ಯತೆಯಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ತಿಳಿಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಭಾನುವಾರ ನಡೆದ ಟ್ರಸ್ಟ್‌ನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಟ್ರಸ್ಟ್‌ನ ನಿಯಮಗಳು ಹಾಗೂ ಮ್ಯಾನ್ಯುಯಲ್‌ ಅನ್ನು ಸಭೆಯಲ್ಲಿ ಅಂತಿಮಗೊಳಿಸಲಾಗಿದೆ.

ಮಂದಿರ ನಿರ್ಮಾಣಕ್ಕೆ ಸರಿಸುಮಾರು 1,800 ಕೋಟಿ ರೂ. ವೆಚ್ಚ ತಗುಲಲಿದೆ. ದೇಗುಲದ ಆವರಣದಲ್ಲಿ ಹಿಂದೂ ಧರ್ಮದ ಪ್ರಸಿದ್ಧ ಯೋಗಿ, ಸಾಧು-ಸಂತರ ಮೂರ್ತಿ ಹಾಗೂ ರಾಮಾಯಣ ಕಾಲದ ಪ್ರಮುಖರ ಮೂರ್ತಿಗಳನ್ನು ಸ್ಥಾಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದೂ ಚಂಪತ್‌ ರಾಯ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next