Advertisement

ರಾಮಲಿಂಗಾ ರೆಡ್ಡಿಗೆ ಮಂತ್ರಿ ಸ್ಥಾನ ಸದ್ಯಕ್ಕಿಲ್ಲ

10:55 PM Jun 10, 2019 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗುವುದಿಲ್ಲ ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಮಲಿಂಗಾ ರೆಡ್ಡಿ ಬೆಂಬಲಿಗರಿಗೆ ಸ್ಪಷ್ಟವಾಗಿ ಹೇಳಿದ್ದಾರೆ.

Advertisement

ಸೋಮವಾರ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ಬಿಬಿಎಂಪಿ ಮಾಜಿ ಮೇಯರ್‌ ಮಂಜುನಾಥ ರೆಡ್ಡಿ ನೇತೃತ್ವದ ನಿಯೋಗಕ್ಕೆ ಸಿದ್ದರಾಮಯ್ಯ, ಸದ್ಯಕ್ಕೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ರಾಮಲಿಂಗಾರೆಡ್ಡಿ ಬೆಂಬಲಿಗರು ನಿರಾಶರಾಗಿದ್ದಾರೆ.

ಸದ್ಯಕ್ಕೆ ಬಿಜೆಪಿಯವರು ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯದಂತೆ ತಡೆದು ಸರ್ಕಾರವನ್ನು ಸುಭದ್ರಗೊಳಿಸಲು ಇಬ್ಬರು ಪಕ್ಷೇತರರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ಮುಂದೆ ಪುನಾರಚನೆಯ ಸಂದರ್ಭದಲ್ಲಿ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next