Advertisement

ಬಿಎಸ್ ವೈ ಭೇಟಿಯಾದ ರಾಮಲಿಂಗ ರೆಡ್ಡಿ

12:30 PM Nov 03, 2019 | keerthan |

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ.

Advertisement

ಭೇಟಿಯ ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಷೇತ್ರದ ಕೆಲವು ಅಭಿವೃದ್ಧಿ ‌ಕೆಲಸಗಳ ಬಗ್ಗೆ ಸಿಎಂ ‌ಜತೆ ಚರ್ಚಿಸಲಾಗಿದೆ. ‌ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಕೇಂದ್ರ ಸರ್ಕಾರದ ಸಹಕಾರ ಸಿಕ್ಕಿದ್ದರೆ ಬಿಜೆಪಿ ಸರ್ಕಾರದ ಆಡಳಿತಕ್ಕೆ ಒಳ್ಳೆಯ ಹೆಸರು ಬರುವ ಸಾಧ್ಯತೆಯಿತ್ತು. ಆದರೆ ಬರ, ಅತಿವೃಷ್ಟಿ ವಿಚಾರದಲ್ಲಿ ಕೇಂದ್ರದ ನಿಲರ್ಕ್ಷ್ಯ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಬೇಸರ ಉಂಟು ಮಾಡಿದೆ. ಅತಿವೃಷ್ಟಿ, ಬರದಂತ ಪರಿಸ್ಥಿತಿಯಲ್ಲಿ ಯಾವುದೇ ಸರ್ಕಾರವಿದ್ದರೂ ಕೇಂದ್ರದ ನೆರವು ಅಗತ್ಯ. ಆದರೆ ಬಿಜೆಪಿ ಸರ್ಕಾರಕ್ಕೆ ಕೇಂದ್ರ ‌ಸರಿಯಾಗಿ‌ ಸ್ಪಂದಿಸಿಲ್ಲ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಭೇಟಿಯಾಗಿರುವುದಕ್ಕೆ ರಾಜಕೀಯ ಕಾರಣ ಹುಡುಕುವುದು ಸರಿಯಲ್ಲ. ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದಿದ್ದಾರೆ. ಅವರು ಪ್ರತಿಪಕ್ಷ ನಾಯಕರಾಗಿರುವುದರಿಂದ ಅಂಕಿ ಅಂಶದ ಮಾಹಿತಿ ಇಟ್ಟುಕೊಂಡು ‌ಹೇಳಿರಬಹುದು.  ನಾನು ಕೇವಲ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಹೊರತು ಪಡಿಸಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next