Advertisement

Ramanagar: ಜಲಾಶಯದ ಬಳಿ ಪುಡಿರೌಡಿಗಳ ಅಟ್ಟಹಾಸ; ಯುವಕರ ಮೇಲೆ ಮಾರಣಾಂತಿಕ ಹಲ್ಲೆ

03:20 PM Oct 27, 2023 | Team Udayavani |

ರಾಮನಗರ: ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಬಳಿ ಹಾಡಹಗಲೇ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪುಡಿರೌಡಿಗಳು ಅಟ್ಟಹಾಸ ನಡೆಸಿದ ಘಟನೆ ಇತ್ತೀಚೆಗೆ ನಡೆದಿದೆ. ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಎರಡು ದಿನಗಳ ಹಿಂದೆ ನಡೆದ ಈ ಘಟನೆ ಇದೀಗ ಬೆಳಕಿಗೆ ಬಂದಿದೆ. ನಾಲ್ವರು ಯುವಕರು ಜಲಾಶಯದ ಬಳಿ ಕಂಠಪೂರ್ತಿ ಕುಡಿದು ಯದ್ವಾತದ್ವ ಡ್ರೈವಿಂಗ್ ಮಾಡಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಇಬ್ಬರು ಸ್ಥಳೀಯ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇಬ್ಬರು ಯುವಕರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿರುವ ವೀಡಿಯೋ ಸ್ಥಳೀಯರ ಮೊಬೈಲ್‌ ನಲ್ಲಿ ಸೆರೆಯಾಗಿದೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next