Advertisement

Ramanagar; ಈಜಲು ಹೋಗಿ ನೀರು ಪಾಲಾದ ಬಾಲಕ: ಹೆದರಿ ಓಡಿದ ಸ್ನೇಹಿತರು

06:02 PM Aug 14, 2023 | |

ರಾಮನಗರ: ಸ್ನೇಹಿತರ ಜೊತೆ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರುಪಾಲಾದ ಘಟನೆ ರಾಮನಗರ ತಾಲ್ಲೂಕಿನ ದ್ಯಾವರಸನೇಗೌಡನದೊಡ್ಡಿ ಬಳಿ ನಡೆದಿದೆ.

Advertisement

ಮೃತ ಬಾಲಕನನ್ನು ರಾಮನಗರ ಟೌನ್ ನ ವಿನಾಯಕನಗರ ನಿವಾಸಿ ಕಿಶೋರ್ (14 ವರ್ಷ) ಎಂದು ಗುರತಿಸಲಾಗಿದೆ. ಎಂಟನೇ ತರಗತಿ ಓದುತ್ತಿದ್ದ ಕಿಶೋರ್ ರವಿವಾರ ಮಧ್ಯಾಹ್ನ ಸ್ನೇಹಿತರ ಜೊತೆ ಈಜಲು ಹೋಗಿದ್ದ.

ಅರ್ಕಾವತಿ ನದಿಯಲ್ಲಿ ಈಜುತ್ತಿದ್ದ ಕಿಶೋರ್ ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತು ಭಯದಲ್ಲಿ ಜಾಗ ಖಾಲಿ ಮಾಡಿದ್ದರು. ಕಿಶೋರ್ ಮನೆಯವರಿಗೂ ವಿಚಾರ ತಿಳಿಸಿರಲಿಲ್ಲ. ಇತ್ತ ಮಗನಿಗಾಗಿ ಹುಡುಕಾಡಿದ್ದ ಪೋಷಕರು ಮಗ ಕಾಣೆಯಾಗಿದ್ದಾನೆ ಎಂದು ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದು ಬೆಳಿಗ್ಗೆ ಕಿಶೋರ್ ಬಗ್ಗೆ ಸ್ನೇಹಿತರ ಬಳಿ ಪೊಲೀಸರು ವಿಚಾರಿಸಿದಾಗ ನೀರಿನಲ್ಲಿ ಮುಳುಗಿ ಹೋಗಿರುವ ಬಗ್ಗೆ ಬಾಯ್ಬಿಟ್ಟಿದ್ದರು.

ಇದನ್ನೂ ಓದಿ:FIR .. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ: ಉಪ್ಪಿ ಮಾರ್ಮಿಕ ಟ್ವೀಟ್

ಹೀಗಾಗಿ ಅರ್ಕಾವತಿ ನದಿಯಲ್ಲಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದಾಗ ಕಿಶೋರ್ ಮೃತ ದೇಹ ಪತ್ತೆಯಾಗಿದೆ.

Advertisement

ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next