Advertisement

Ramanagara; ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

06:12 PM Jul 20, 2023 | Team Udayavani |

ರಾಮನಗರ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹರಿದ ರಾಷ್ಟ್ರಧ್ವಜ ಹಾರಾಡುತ್ತಿದ್ದು, ಧ್ವಜ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

Advertisement

ಜಿಲ್ಲಾ ಆಡಳಿತದ ಶಕ್ತಿ ಕೇಂದ್ರವಾಗಿರುವ ಜಿಲ್ಲಾಧಿಕಾರಿ ಕಚೇರಿ ಮೇಲ್ಭಾಗ ಪ್ರತಿದಿನ ಹಾರಿಸುವ ರಾಷ್ಟ್ರಧ್ವಜ ಹರಿದು ಹೋಗಿದೆ.ಹರಿದ ಧ್ವಜವನ್ನು ಹಾರಾಟ ಮಾಡುವುದು ಧ್ವಜಸಂಹಿತೆಯ ಪ್ರಕಾರ ನಿಷಿದ್ಧವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲೇ ಹರಿದ ಬಾವುಟ ಹಾರಾಡುತ್ತಿದ್ದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹತ್ತಾರು ಇಲಾಖೆ ಅಧಿಕಾರಿಗಳು, ನೂರಾರು ಸಿಬಂದಿಗಳು ಪ್ರತಿನಿತ್ಯ ಕೆಲಸ ಮಾಡುತ್ತಿದ್ದರೂ ಯಾರೂ ಗಮನಹರಿಸುತ್ತಿಲ್ಲ.

ಪ್ರತಿದಿನ ಧ್ವಜಾರೋಹಣ ಮತ್ತು ಅವರೋಹಣ ಮಾಡುವಾಗಲೂ ಧ್ವಜಹರಿದಿರುವುದನ್ನು ಗಮನಿಸದಿರುವುದು ಜಿಲ್ಲಾಡಳಿತದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಧ್ವಜಸಂಹಿತೆ ಉಲ್ಲಂಘಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next