Advertisement

Ramanagara; ಬರ್ತ್ ಡೇ ಪಾರ್ಟಿ ಗಲಾಟೆ ಯುವಕನ ಹತ್ಯೆಯಲ್ಲಿ ಅಂತ್ಯ

04:43 PM Jan 29, 2024 | Team Udayavani |

ಕುದೂರು: ಹುಟ್ಟು ಹಬ್ಬ ಆಚರಿಸುವ ವೇಳೆ ನೆಡೆದ ಗಲಾಟೆಯಲ್ಲಿ ಯುವಕನೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೂಚ್ಚಿ ಕೂಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೂಲೀಸ್ ಠಾಣೆ ವ್ಯಾಪ್ತಿಯ ತಿಮ್ಮೇಗೌಡನಪಾಳ್ಯದಲ್ಲಿ ನೆಡೆದಿದೆ.

Advertisement

ಕುದೂರು ಹೋಬಳಿಯ ತಿಮ್ಮೇಗೌಡನ ಪಾಳ್ಯದ ಕಾರ್ಪೋರೇಟರ್ ಮಂಜುನಾಥ್ ಅವರ ತೋಟದಲ್ಲಿ ಭಾನುವಾರ ರಾತ್ರಿ ಸ್ನೇಹಿತರೆಲ್ಲರೂ ಸೇರಿ ಬರ್ತ್ ಡೇ ಪಾರ್ಟಿ ಮಾಡಿದ್ದು, ಈ ವೇಳೆ ಗಲಾಟೆ ನೆಡೆದಿದೆ. ಅಶೋಕ್ (30) ಎಂಬಾತನಿಗೆ ದುಷ್ಕರ್ಮಿಗಳು ಮಾರಾಕಾಸ್ತ್ರ ಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಜ 21 ರಂದು ದಿಲೀಪ್ ಎಂಬುವವರ ಬರ್ತ್ ಡೇ ಆಗಿತ್ತು. ತಡವಾಗಿ ಪಾರ್ಟಿ ಮಾಡುತ್ತಿದ್ದರು.ತಡರಾತ್ರಿ ಕಂಠ ಪೂರ್ತಿ ಕುಡಿದು ಗಲಾಟೆ ಮಾಡಿಕೂಂಡ ಬಗ್ಗೆ ಸ್ಥಳೀಯರು 112ಕ್ಕೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಡಿವೈಎಸ್ ಪಿ ಪ್ರವೀಣ್ , ಸಿಪಿಐ ನವೀನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನೆಡೆಸಿದ್ದಾರೆ.ಈ ಸಂಬಂಧ ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಾರ್ಟಿಯಲ್ಲಿ ಭಾಗಿಯಾಗಿದ್ದವರೆಲ್ಲರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next