Advertisement

Ramanagar; ಸಮಯಕ್ಕೆ ಸರಿಯಾಗಿ ಬಾರದ ಬಸ್: ವಿದ್ಯಾರ್ಥಿಗಳಿಂದ ಪ್ರತಿಭಟನೆ

06:37 PM Jan 19, 2024 | Team Udayavani |

ರಾಮನಗರ: ಸರಿಯಾದ ಸಮಯಕ್ಕೆ ಬಾರದ ಕೆಎಸ್ಆರ್ ಟಿಸಿ ಬಸ್ ವಿರುದ್ಧ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ರಾಮನಗರ ತಾಲೂಕಿನ ಶ್ಯಾನುಭೋಗನ ಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಬಸ್ಸು ಪ್ರತಿದಿನ ನಿಗದಿತ ಸಮಯಕ್ಕಿಂತ ತಡವಾಗಿ ಬರುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರಲು ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದರೆ ಬಸ್ ಚಾಲಕ ಉದ್ದಟತನದ ಉತ್ತರ ನೀಡುತ್ತಾನೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಇಂದು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕೆಎಸ್ ಆರ್ಟಿಸಿ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದ್ದಾರೆ. ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ ಅವರು, ಚಾಲಕನನ್ನು ಬದಲಾವಣೆ ಮಾಡುವುದಾಗಿ ಹೇಳಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂದಕ್ಕೆ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next