Advertisement
ಜಿಲ್ಲಾ ಪಂಚಾಯ್ತಿ ಭವನದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನವಜಾತ ಶಿಶುವಿನಿಂದ 6 ವರ್ಷದ ಮಕ್ಕಳ ಅಪೌಷ್ಟಿಕತೆ ಪತ್ತೆ ಹಚ್ಚಲಾಗುವುದು. ಮಕ್ಕಳ ಮಾಹಿತಿಯನ್ನು ಸ್ನೇಹ ಮೊಬೈಲ್ ಆ್ಯಪ್ನಲ್ಲಿ ದಾಖಲಿಸಿಕೊಳ್ಳಲಾಗುವುದು ಎಂದರು.
Related Articles
Advertisement
ನೋಡೆಲ್ ಅಧಿಕಾರಿಗಳ ನೇಮಕ: ಜಿಲ್ಲೆಯ ವೈದ್ಯಾಧಿಕಾರಿಗಳು, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾ ರಿಗಳು ತಮ್ಮ ವ್ಯಾಪ್ತಿಯಲ್ಲಿ ಅಭಿಯಾನದ ಮೇಲ್ವಿಚಾರಣೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆ ವತಿಯಿಂದ ಪ್ರತಿ ತಾಲೂಕಿಗೂ ಒಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಉಪನಿರ್ದೇಶಕರು, ಡಿಎಚ್ಒ ಮತ್ತು ಆರ್ಸಿಎಚ್ ಅಧಿಕಾರಿಗಳು ಮೇಲುಸ್ತುವಾರಿ ನಡೆಸುವರು ಎಂದು ಮಾಹಿತಿ ನೀಡಿದರು.
ಅಂಗನವಾಡಿ, ಆಶಾ ಕಾರ್ಯಕರ್ತರು ಮಕ್ಕಳ ಮಾಹಿತಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಸಂಗ್ರಹಿಸಲಿದ್ದಾರೆ. ಪೋಷಕರು ಮತ್ತು ಪಾಲಕರು ತಮ್ಮ ಮಕ್ಕಳನ್ನು ನಿಗದಿತ ದಿನಾಂಕಗಳಂದು 0-6 ವಯೋ ಮಾನದ ಮಕ್ಕಳನ್ನು ಕರೆತಂದು, ಎಲ್ಲಾ ಮಾಹಿತಿಯನ್ನು ಕೊಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸ್ನೇಹ ಆ್ಯಪ್ ಬಿಡುಗಡೆ: ಸುದ್ದಿಗೋಷ್ಠಿಯ ನಂತರ ಅಪೌrಕತೆ ಅಭಿಯಾನಕ್ಕೆ ಎಂದು ಸಿದ್ಧವಾಗಿರುವ ಸ್ನೇಹ ಮೊಬೈಲ್ ಆ್ಯಪ್ನ್ನು ಸಿಇಒ ಮುಲ್ಲೈ ಮುಹಿಲನ್ ಬಿಡುಗಡೆ ಮಾಡಿದರು. ಆ್ಯಪ್ ಸಿದ್ಧಪಡಿಸಿರುವ ಸಿ-ಸ್ಟೆಪ್ ಕಂಪನಿಯ ಪ್ರತಿನಿಧಿಗಳು ಆ್ಯಪ್ ಬಳಸುವುದು ಹೇಗೆ ಎಂಬ ವಿಚಾರದಲ್ಲಿ ಸಭೆಯಲ್ಲಿ ನೆರೆದಿದ್ದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿದರು. ಈ ವೇಳೆ ಡಿಎಚ್ಒ ಡಾ.ಅಮರ್ನಾಥ್, ಆರ್.ಸಿ.ಎಚ್ ಅಧಿಕಾರಿ ಡಾ.ಲಕ್ಷ್ಮೀಪತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಉಪಸ್ಥಿತರಿದ್ದರು.