Advertisement

Ramanagara: ಮನೆಯಲ್ಲೇ ನೇಣು ಬಿಗಿದುಕೊಂಡ ಮಹಿಳೆ… ಪೊಲೀಸರಿಂದ ಪ್ರಿಯಕರನ ಬಂಧನ

09:27 AM Oct 19, 2023 | Team Udayavani |

ರಾಮನಗರ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕನಕಪುರದ ನಿರ್ವಾಣೇಶ್ವರ ನಗರದಲ್ಲಿ ಮಂಗಳವಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಕಮಲಾಬಾಯಿ (38) ಆತ್ಮಹತ್ಯೆಗೆ ಶರಣಾದ ಮಹಿಳೆ.

ಮಂಗಳವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಮಲಾಬಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಬುಧವಾರ ಬೆಳಿಗ್ಗೆ ಮನೆಯವರಿಗೆ ಗೊತ್ತಾಗಿದೆ ಅಷ್ಟೋತ್ತಿಗಾಗಲೇ ಮಹಿಳೆ ಮೃತಪಟ್ಟಿದ್ದರು ಎನ್ನಲಾಗಿದೆ. ಬಳಿಕ ಮನೆಯವರು ಕನಕಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಯ ಪ್ರಿಯಕರ ಲಿಂಗರಾಜು ನಾಯಕ(47) ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪತಿಯಿಂದ ದೂರವಾಗಿದ್ದ ಕಮಲಾಬಾಯಿ ಲಿಂಗರಾಜು ನಾಯಕ್ ಜೊತೆ ಸಂಬಂಧ ಹೊಂದಿರುವ ಬಗ್ಗೆ ಶಂಕೆ ಇತ್ತು, ಅಲ್ಲದೆ ಈ ಹಿಂದೆ ಇಬ್ಬರು ಜೊತೆಯಲ್ಲಿ ವಾಸಿಸುತ್ತಿದ್ದು, ಇಬ್ಬರ ನಡುವೆ ಗಲಾಟೆ ಆಗಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಮೃತ ಮಹಿಳೆಯ ಮಗ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಲಿಂಗರಾಜು ನನ್ನ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಲಿಂಗರಾಜುನನ್ನು ವಿಚಾರಣೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: Dengue: ಉತ್ತರ ಪ್ರದೇಶದಲ್ಲಿ 13,000 ಡೆಂಗ್ಯೂ ಪ್ರಕರಣ… 24 ಮಂದಿ ಮೃತ್ಯು, ಹೆಚ್ಚಿದ ಆತಂಕ

Advertisement

Udayavani is now on Telegram. Click here to join our channel and stay updated with the latest news.

Next