Advertisement

ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಆತ್ಮಹತ್ಯೆ ಶಂಕೆ

01:03 PM Jan 09, 2024 | Team Udayavani |

ರಾಮನಗರ: ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಪುರ ಗ್ರಾಮದ‌ ಹೊರವಲಯದಲ್ಲಿರುವ ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಮೃತ ವ್ಯಕ್ತಿಯನ್ನು ಬೆಂಗಳೂರಿನ ಹೊಸಕೆರೆ ಹಳ್ಳಿ ನಿವಾಸಿಯಾದ ಲೋಕೇಶ್(35) ಎಂದು ಗುರುತಿಸಲಾಗಿದೆ.

ಲೋಕೇಶ್ ಕಳೆದ ತಿಂಗಳು ಡಿ.31 ರಂದು ನಾಪತ್ತೆಯಾಗಿದ್ದ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಬೈಕ್ ನಲ್ಲಿ ಬಂದು ಸಿಂಗರಾಜಪುರದ ಬೆಟ್ಟದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು. ಬೆಟ್ಟದ ಬಳಿ ಕಳೆದ ಮೂರು ದಿನಗಳಿಂದ ಬೈಕ್ ನಿಲ್ಲಿಸಿದ್ದನ್ನು ನೋಡಿ ಅನುಮಾನ ಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಅಕ್ಕೂರು ಠಾಣೆ ಪೊಲೀಸರು ಪರಿಶೀಲಿಸಿದಾಗ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ದೇಹ ಪತ್ತೆಯಾಗಿದೆ.

ಇದನ್ನೂ ಓದಿ: Ayodhya: ರಾಮಮಂದಿರ ಉದ್ಘಾಟನೆ ಸನ್ನಿಹಿತ- 30 ವರ್ಷದ ಬಳಿಕ ಮೌನ ವೃತ ಮುರಿಯಲಿರುವ ಮಹಿಳೆ!

Advertisement
Advertisement

Udayavani is now on Telegram. Click here to join our channel and stay updated with the latest news.

Next