Advertisement

Ramanagara;ನಡುರಸ್ತೆಯಲ್ಲೇ ಯುವಕರ ಮಾರಾಮಾರಿ:ಕ್ರಮಕ್ಕೆ ಒತ್ತಾಯ

06:29 PM Nov 20, 2023 | Team Udayavani |

ರಾಮನಗರ: ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿ ನಡುರಸ್ತೆಯಲ್ಲೇ ಯುವಕರ ಗುಂಪು ಮಾರಾಮಾರಿ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

Advertisement

ಯುವಕರ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಪುಂಡರ ಹಾವಳಿ ಹೆಚ್ಚಾಗಿದ್ದು,ನಿತ್ಯ ಕಿರಿಕ್ ಮತ್ತು ರಸ್ತೆಯಲ್ಲೇ ಜಗಳ ಹೆಚ್ಚಾಗುತ್ತಿದೆ ಎಂದು ದೂರುಗಳು ಕೇಳಿಬಂದಿದ್ದು,ಯುವಕರ ಪುಂಡಾಟದ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಭಯಭೀತಗೊಂಡ ಸಾರ್ವಜನಿಕರು ದೂರಿದ್ದಾರೆ. ನಿತ್ಯ ಸಾವಿರಾರು ಮಂದಿ ಓಡಾಡುವ ಸ್ಥಳದಲ್ಲಿದ್ದ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next