Advertisement

Ramanagara; ಆಕಸ್ಮಿಕ ಬೆಂಕಿಯಿಂದಾಗಿ ಸುಟ್ಟು ಭಸ್ಮವಾದ ಮಾವಿನ ಮರಗಳು

06:18 PM Mar 21, 2024 | Team Udayavani |

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಾಳಾಲುಸಂದ್ರ ಗ್ರಾಮದಲ್ಲಿ ಮಾವಿನ ಮರಗಳು ಬೆಂಕಿಗೆ ಆಹುತಿಯಾಗಿವೆ.

Advertisement

ಅರಾಳಾಲುಸಂದ್ರ ಗ್ರಾಮದ ಪಟೇಲ್‌ ಕೆ ಶಿವಣ್ಣನವರ ಮಗ ಮಲ್ಲೇಶ್ ಎಂಬವರ ಜಮೀನಿನಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು ಒಂದು ಎಕರೆ ಭೂಮಿಯಲ್ಲಿದ್ದ 10 ಮಾವಿನ ಮರಗಳು ಬೆಂಕಿಯಲ್ಲಿ ಸುಟ್ಟು ಬೂದಿಯಾಗಿವೆ.

ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯೂ ರೈತನ ಜೀವನದ ತಾಪ ಹೆಚ್ಚಿಸಿದೆ.

ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡುವಂತೆ ಮಲ್ಲೇಶ್ ರವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next