Advertisement

Ramanagara; ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ರವಿ ಗಾಣಿಗ ಉಪವಾಸ ಸತ್ಯಾಗ್ರಹ

12:57 PM Mar 07, 2024 | Team Udayavani |

ರಾಮನಗರ: ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ರವಿ ಗಾಣಿಗ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ರಾಮನಗರ ತಾಲೂಕಿನ ಬಸವನಪುರ ಗ್ರಾಮದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಬಳಿ ಧರಣಿ ಆರಂಭಿಸಿದ್ದಾರೆ.

Advertisement

ಹನಕೆರೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಶಾಸಕರಿಗೆ ಸಾಥ್ ನೀಡುತ್ತಿದ್ದಾರೆ. ದಶಪಥ ಹೆದ್ದಾರಿ ತಡೆದು ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನೂ ಶಾಸಕರು ನೀಡಿದ್ದಾರೆ.

ಡಿಕೆ ಸುರೇಶ್ ಸಾಥ್: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರು ಶಾಸಕರಿಗೆ ಸಾಥ್ ನೀಡಿದರು. ಪ್ರತಿಭಟನಾಕಾರರ ಜೊತೆ ಕುಳಿತ ಸಂಸದ ಸುರೇಶ್ ಪ್ರತಿಭಟನೆಯಲ್ಲಿ ಭಾಗಿಯಾದರು.

Advertisement

Udayavani is now on Telegram. Click here to join our channel and stay updated with the latest news.

Next