Advertisement

Ramanagara: ಒಂಟಿ ಸಲಗದ ದಾಳಿಗೆ ವೃದ್ಧ ಬಲಿ

05:38 PM Nov 04, 2023 | Team Udayavani |

ರಾಮನಗರ: ಕಾಡಾನೆ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಶನಿವಾರ ಕನಕಪುರ ತಾಲೂಕಿನ ಹೊನ್ನಿಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ಮರೀಗೌಡ(75) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಒಂಟಿ ಸಲಗ ಜಮೀನನಲ್ಲಿ‌ ಕೆಲಸ ಮಾಡುವಾಗ ಏಕಾಏಕಿ ದಾಳಿ ಮಾಡಿದೆ. ಕೋಡಿಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕನಕಪುರ ತಾಲೂಕು ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದೆ. ಮೃತ ಕುಂಟುಂಬಕ್ಕೆ ಪರಿಹಾರ ಕೊಡಿಸಲು ಅರಣ್ಯಾಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next