Advertisement

Ramanagara: ಲಾರಿ-ಟಿಟಿ ವಾಹನ ಅಪಘಾತ, ಮೂವರು ಸ್ಥಳದಲ್ಲೇ ಸಾವು

10:06 AM Feb 17, 2024 | Team Udayavani |

ರಾಮನಗರ: ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿ, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ಸಂಭವಿಸಿದೆ.

Advertisement

ಮೈಸೂರು ಮೂಲದ ಸೋಮಲಿಂಗಪ್ಪ(70), ಸೋಮಣ್ಣ(68), ರಾಜೇಶ್ವರಿ(52) ಮೃತಪಟ್ಟವರು.

ಹಾವೇರಿಯಲ್ಲಿ  ಸಂಬಂಧಿಕರ ಮದುವೆಗೆ ಹೋಗಿದ್ದವರು ಬೆಂಗಳೂರು ಮೂಲಕ ಮತ್ತೆ ಮೈಸೂರಿಗೆ ತೆರಳುವಾಗ ಈ ಅಪಘಾತ ನಡೆದಿದೆ. ಟಿಟಿ ವಾಹನದಲ್ಲಿದ್ದ  ಉಳಿದ ಆರು ಮಂದಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಮೃತದೇಹಗಳು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next