Advertisement

ರಾಮನಗರ : ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲೇ ಸಾವು

04:47 PM Sep 04, 2022 | Team Udayavani |

ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಅಂಗಡಿ ಮಳಿಗೆಗೆ ಢಿಕ್ಕಿ ಹೊಡೆದ ಪರಿಣಾಮ ಅಂಗಡಿ ಮುಂದೆ ನಿಂತಿದ್ದ ಬಾಲಕ ಸಾವನ್ನಪ್ಪಿರುವ ಘಟನೆ‌ ನಡೆದಿದೆ.

Advertisement

ಹಾರೋಹಳ್ಳಿ ಸಮೀಪದ ರಾಚೇನಮಡು ಗ್ರಾಮದಲ್ಲಿ ಘಟನೆ ನಡೆದಿದ್ದು ರಾಚೇನಮಡು ಗ್ರಾಮದ ಜೀವನ್ (13) ಮೃತ ದುರ್ದೈವಿಯಾಗಿದ್ದಾನೆ .

ತಲಗಟ್ಟಪುರ ದಿಂದ ಕಗ್ಗಲೀಪುರ ಕಡೆಗೆ 407 ಗೂಡ್ಸ್ ವಾಹನ ಕಬ್ಬಿಣ ತುಂಬಿಕೊಂಡು ಹೋಗುತ್ತಿತ್ತು ಎನ್ನಲಾಗಿದ್ದು , ಚಾಲಕನ‌ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಗೂಡ್ಸ್ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ.

ಸ್ಥಳದಲ್ಲೇ ಸಾವನ್ನಪ್ಪಿದ ಜೀವನ್ ಮೃತ ದೇಹವನ್ನು ಮರಣೋತ್ತರ ಪರಿಕ್ಷೆಗಾಗಿ ರಾಜರಾಜೇಶ್ವರಿ ನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Advertisement

ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next