Advertisement

Ramanagara: ಬೋನಿಗೆ‌ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಜನತೆ

11:43 AM Nov 14, 2023 | Team Udayavani |

ರಾಮನಗರ: ಜನತೆಗೆ ಭಯ ಮೂಡಿದಿದ್ದ ಐದು ವರ್ಷದ ಹೆಣ್ಣು ಚಿರತೆಯೊಂದು ಬೋನಿಗೆ‌ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮಾಗಡಿ ಪಟ್ಟಣದ ಗವಿ ಗಂಗಾಧರೇಶ್ವರ ದೇವಾಲಯದ ಬಳಿ ಇರಿಸಲಾಗಿದ್ದ ಬೋನಿಗೆ ಬಿದ್ದ ಚಿರತೆ ಸೆರೆಯಾಗಿದೆ.

Advertisement

ಹಲವು ದಿನಗಳಿಂದ ಮಾಗಡಿ ಪಟ್ಟಣದ ಸುತ್ತಮುತ್ತ ಚಿರತೆ ಉಪಟಳ‌ ನೀಡುತ್ತಿತ್ತು.  ಚಿರತೆ ಹಾವಳಿಯಿಂದ ಬೇಸತ್ತಿದ್ದ ಮಾಗಡಿ ಜನತೆ, ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದರು. ಕಳೆದ ಎರಡು ದಿನಗಳ ಹಿಂದೆ ದೇವಾಲಯದ ಪಕ್ಕದಲ್ಲಿ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಮಂಗಳವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ.

ಮಾಗಡಿ ಪಟ್ಟಣದ ಜನರು ಚಿರತೆ ನೋಡಲು ಮುಗಿಬಿದ್ದಿದ್ದಾರೆ.  ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಚನದುರ್ಗ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ಬಿಡುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next