Advertisement

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

04:14 PM May 17, 2024 | Team Udayavani |

ರಾಮನಗರ: ನೀರಿನ ಹೊಂಡದಲ್ಲಿ ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲಾದ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಶುಕ್ರವಾರ ನಡೆದಿದೆ.

Advertisement

ಮೃತ ಮಕ್ಕಳನ್ನು ಶಾಬಾಜ್ (14) ಸುಲ್ತಾನ್ (13) ರಿಹಾನ್ ಖಾನ್ (16) ಎಂದು ಗುರುತಿಸಲಾಗಿದೆ. ಇವರಲ್ಲಿ ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರು. ಮೃತರೆಲ್ಲರೂ ರಾಮನಗರ ಟೌನ್ ನ ಸುಲ್ತಾನ್ ನಗರದವರು.

ಈ ಬಾಲಕರು ನಮಾಜ್ ಮುಗಿಸಿ ಈಜಲು ಹೋಗಿದ್ದರು. ಎಂಟು ಬಾಲಕರ ಪೈಕಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next