Advertisement

ರಾಮನಗರ: ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು

02:37 PM Jun 09, 2023 | Team Udayavani |

ರಾಮನಗರ: ದಶಪಥ ಎಕ್ಸ್‌ಪ್ರೆಸ್‌ ವೇ ಶೇಷಗಿರಿಹಳ್ಳಿ ಟೋಲ್ ಸಿಬ್ಬಂದಿ ಕೊಲೆ ಪ್ರಕರಣದ ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.

Advertisement

ಬೆಂಗಳೂರಿನ ಸುಂಕದಕಟ್ಟೆಯ ಅಭಿಷೇಕ್ (29) ಮತ್ತು ಸಂತೋಷ್ (23) ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ: ನಗರದ ದಶಪಥ ಎಕ್ಸ್‌ಪ್ರೆಸ್‌ ವೇ ಶೇಷಗಿರಿಹಳ್ಳಿಯ ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆಯ ಸಿಕ್ಕೆಪಾಳ್ಯ ನಿವಾಸಿ ಪವನ್ (30) ಹೆಜ್ಜಾಲ ಸಮೀಪ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.

ಆರೋಪಿಗಳು ಜೂ. 5 ರಂದು ಸ್ನೇಹಿತರೊಂದಿಗೆ ಕಾರಿನಲ್ಲಿ ರಾತ್ರಿ ಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಶೇಷಗಿರಿಹಳ್ಳಿ ಟೋಲ್ ನಲ್ಲಿ ಪವನ್ ಜೊತೆ ಗಲಾಟೆ ಮಾಡಿಕೊಂಡಿದ್ದರು. ಆ ಬಳಿಕ ಪವನ್‌ ಮನೆಗೆ ಹೋಗುವಾಗ ಬೈಕ್‌ ನಲ್ಲಿ ಬಂದು ಆರೋಪಿಗಳು ಮತ್ತೆ ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿದ ಪರಿಣಾಮ ಆರೋಪಿಗಳು ಪವನ್‌ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದಿದ್ದರು.

ಈ ಸಂಬಂಧ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಬಿಡದಿ ಪೊಲೀಸರು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಆಹಾರ ಪೂರೈಕೆ ಮಾಡುವ ಕಂಪನಿಯಲ್ಲಿ  ಆರೋಪಿಗಳು ಡೆಲಿವರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next