Advertisement

Tragedy: ಪ್ರೀತಿಗೆ ಪೋಷಕರ ವಿರೋಧ… ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಜೋಡಿ

09:48 AM Aug 12, 2023 | Team Udayavani |

ರಾಮನಗರ: ರೈಲಿಗೆ ತಲೆಕೊಟ್ಟು ಯುವಕ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.

Advertisement

ನವ್ಯ(19) ಹಾಗೂ ಹರ್ಷವರ್ಧನ (20) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ನವ್ಯ ಹಾಗೂ ಹರ್ಷವರ್ಧನ ಪರಸ್ಪರ ಪ್ರೀತಿಸುತ್ತಿದ್ದು ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳು ಬೈಕ್ ನಲ್ಲಿ ರಾಮನಗರ ಹೊರವಲಯದ ಕುಂಬಾಪುರ ಗೇಟ್ ಬಳಿಗೆ ಬಂದು ಬೈಕನ್ನು ದೂರದಲ್ಲಿ ನಿಲ್ಲಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೇಹದ ಮೇಲೆ ರೈಲು ಹರಿದ ಪರಿಣಾಮ ದೇಹ ಛಿದ್ರ ಛಿದ್ರಗೊಂಡಿದೆ, ಘಟನಾ ಸ್ಥಳಕ್ಕೆ ಚನ್ನಪಟ್ಟಣ ರೈಲ್ವೇ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಚನ್ನಪಟ್ಟಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: MiG-29: ಶತ್ರು ರಾಷ್ಟ್ರಗಳ ಮೇಲೆ ಕಣ್ಣಿಡಲು ಶ್ರೀನಗರದಲ್ಲಿ MiG-29 ಫೈಟರ್ ಜೆಟ್ ನಿಯೋಜನೆ

Advertisement

Udayavani is now on Telegram. Click here to join our channel and stay updated with the latest news.

Next